
ಸಕಲೇಶಪುರ(ನ.28): ನಿದ್ದೆಯಲ್ಲಿದ್ದ ಹಾಸನ ಜಿಲ್ಲೆ ಸಕಲೇಶಪುರದ ಅಬಕಾರಿ ಇಲಾಖೆ ಕೊನೆಗೂ ಎಚ್ಚರವಾಗಿದ್ದು, ಸಕಲೇಶಪುರದ ಈಚಲುಬೀಡಿನಲ್ಲಿ ಕಳ್ಳಭಟ್ಟಿ ದಂಧೆಯಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದೆ.
ಜಯಪ್ಪ, ದೇವರಾಜ್ ಬಂಧಿತರು. ಇದು ಸುವರ್ಣನ್ಯೂಸ್ ಕವರ್ ಸ್ಟೋರಿ ಇಂಪ್ಯಾಕ್ಟ್. ಸಕಲೇಶಪುರ ತಾಲೂಕಿನ ವಿವಿಧೆಡೆ ನಡೆಯುತ್ತಿದ್ದ ಕಳ್ಳಭಟ್ಟಿ ದಂಧೆಯ ಕರಾಳಮುಖವನ್ನು ಸುವರ್ಣನ್ಯೂಸ್ ಕವರ್ ಸ್ಟೋರಿಯಲ್ಲಿ ಬಯಲು ಮಾಡಿತ್ತು. ಇದರಿಂದ ಎಚ್ಚೆತ್ತ ಸಕಲೇಶಪುರ ಅಬಕಾರಿ ಇನ್ಸ್ ಪೆಕ್ಟರ್ ರಮೇಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿ, ಜೈಲಿಗೆ ಕಳುಹಿಸಿದೆ.
ಈಚಲಬೀಡಿನಲ್ಲಿ ಯಾರೆಲ್ಲ ಕಳ್ಳಭಟ್ಟಿ ದಂಧೆಯಲ್ಲಿ ತೊಡಗಿದ್ದರೆಂಬುದನ್ನು ಸುವರ್ಣನ್ಯೂಸ್ ಕವರ್ ಸ್ಟೋರಿಯಲ್ಲಿ ಬಿಚ್ಚಿಟ್ಟಿತ್ತು. ಆ ನಂತರ ಅಬಕಾರಿ ಇಲಾಖೆ ಅಧಿಕಾರಿಗಳು ಕಳ್ಳಭಟ್ಟಿ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.