
ಗ್ಯಾಂಗ್ರಿನ್ನಿಂದ ಒಂದು ಕಾಲು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿರುವ ಹಿರಿಯ ನಟ ಸತ್ಯಜಿತ್ ವರದಿಯನ್ನ ನಿನ್ನೆ ಸುವರ್ಣ ನ್ಯೂಸ್ ಪ್ರಸಾರ ಮಾಡಿತ್ತು. ಇದೀಗ ಸತ್ಯಜಿತ್ ಅವರಿಗೆ ಕೆಲವರು ನೆರವಿಗೆ ಮುಂದಾಗಿದ್ದಾರೆ. ಕಳೆದ 5 ತಿಂಗಳಿನಿಂದ ಸತ್ಯಜಿತ್ ಮನೆಯಲ್ಲಿಯೇ ಇದ್ದಾರೆ. ಒಂದು ಕಾಲು ಕಳೆದುಕೊಂಡಿರುವ ಅವರ ನೆರವಿಗಾಗಿ ಸುವರ್ಣ ನ್ಯೂಸ್ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ನಿನ್ನೆಯಿಂದಲೇ ಸತ್ಯಜಿತ್ ಅವರ ಸಂಕಷ್ಟದ ದಿನಗಳನ್ನ ಕಥೆಯನ್ನ ಸುವರ್ಣ ನ್ಯೂಸ್ ಪ್ರಸಾರ ಮಾಡಿತ್ತು. ಇಂದೂ ಕೂಡ ಪ್ರಸಾರ ಮಾಡ್ತಿದೆ. ಅದನ್ನ ನೋಡಿದ ಸುದೀಪ್ ಅಭಿಮಾನಿಗಳ ಸಂಘದ ಸದಸ್ಯರು ಸತ್ಯಜಿತ್ ಮನೆಗೆ ದಾವಿಸಿದರು. ಹೆಗಡೆ ನಗರದ ಅವರ ಮನೆಯಲ್ಲಿಯೇ 50 ಸಾವಿರ ರೂಪಾಯಿ ನೆರವು ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.