ಸಿದ್ದರಾಮಯ್ಯ ಕುರುಬನೋ, ಲಿಂಗಾಯತನೋ ? ಸ್ವಾಮೀಜಿ ಪ್ರಶ್ನೆ

Published : Mar 07, 2018, 11:50 PM ISTUpdated : Apr 11, 2018, 12:36 PM IST
ಸಿದ್ದರಾಮಯ್ಯ ಕುರುಬನೋ, ಲಿಂಗಾಯತನೋ ? ಸ್ವಾಮೀಜಿ  ಪ್ರಶ್ನೆ

ಸಾರಾಂಶ

ವೀರಶೈವ ಲಿಂಗಾಯತ ಒಂದೇ.  ಇತ್ತೀಚಿನ ದಿನಗಳಲ್ಲಿ ವೀರಶೈವ ಲಿಂಗಾಯ ಧರ್ಮದಿಂದ ಲಿಂಗಾಯತ ಪ್ರತ್ಯೇಕಕ್ಕೆ ಕೆಲವೇ ಕೆಲವು ಮಠಾಧೀಶರು ಹೋರಾಟ ನಡೆಸಿದರು. ವೀರಶೈವ ಧರ್ಮದಿಂದ ಲಿಂಗಾಯತವನ್ನ ಎಂದೂ ಪ್ರತ್ಯೇಕ ಮಾಡಲು ಆಗುವುದಿಲ್ಲ.

ದಾವಣಗೆರೆ(ಮಾ.07): ಮುಖ್ಯಮಂತ್ರಿ ಸಿದ್ದರಾಮಯ್ಯ ಕುರುಬನೋ ಅಥವಾ ಲಿಂಗಾಯತನೋ ಎಂದು ಬಾಳೆಹೊಸೂರಿನ ದಿಂಗಾಲೇಶ್ವರ ಮಠದ ಶ್ರೀದಿಂಗಾಲೇಶ್ವರ ಸ್ವಾಮೀಜಿ ಪ್ರಶ್ನಿಸಿದರು.

99 ಲಿಂಗಾಯತ ಉಪ ಪಂಗಡದಲ್ಲಿ ಕುರುಬ ಕುಂಚಿಟಿಗ ಭೋವಿ ಕಮ್ಮಾರ ಬಡಿಗೇರ ಹೀಗೆ ಇವೆ. ಹೀಗಾಗಿ ಮುಖ್ಯಮಂತ್ರಿಗಳು ಕುರುಬನೋ ಅಥವಾ ಲಿಂಗಾಯತನೋ ಎಂದು ಕೇಳಿದರು.

ದಾವಣಗೆರೆಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ನಿವಿಧ ಮಠದ ಸ್ವಾಮೀಜಿಗಳು, ಲಿಂಗಾಯತ ಧರ್ಮಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಮನ್ನಣೆಗೆ ವಿರೋಧ ವ್ಯಕ್ತಪಡಿಸಿದರು. ವೀರಶೈವ ಲಿಂಗಾಯತ ಒಂದೇ.  ಇತ್ತೀಚಿನ ದಿನಗಳಲ್ಲಿ ವೀರಶೈವ ಲಿಂಗಾಯ ಧರ್ಮದಿಂದ ಲಿಂಗಾಯತ ಪ್ರತ್ಯೇಕಕ್ಕೆ ಕೆಲವೇ ಕೆಲವು ಮಠಾಧೀಶರು ಹೋರಾಟ ನಡೆಸಿದರು. ವೀರಶೈವ ಧರ್ಮದಿಂದ ಲಿಂಗಾಯತವನ್ನ ಎಂದೂ ಪ್ರತ್ಯೇಕ ಮಾಡಲು ಆಗುವುದಿಲ್ಲ. ವೀರಶೈವ-ಲಿಂಗಾಯತ ಎರಡೂ ಒಂದೇ . ರಾಜ್ಯ ಸರ್ಕಾರ ಬಹುಸಂಖ್ಯಾತರ ಮಾತು ಕೇಳದೆ, ಕೆಲವೇ ಕೆಲವರ ಮಾತು ಕೇಳಿದೆ. ತರಾತುರಿಯಲ್ಲಿ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚಿಸಿತು.  ಸಮಿತಿಯಲ್ಲಿ ಇದ್ದವರೆಲ್ಲರೂ ಲಿಂಗಾಯತ ಪ್ರತ್ಯೇಕ ಧರ್ಮದ ಪರ ಇದ್ದವರು' ಎಂದು ತಿಳಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!