
ಮೈಸೂರು : ಸ್ವಾಮಿ ವಿವೇಕಾನಂದ ಹಾಗೂ ಬಸವಣ್ಣ ಅವರನ್ನು ಪಿತೂರಿ ಮಾಡಿ ಕೊಲ್ಲಲಾಗಿದೆ ಎಂದು ಪ್ರಗತಿ ಪರ ಚಿಂತಕ ಕೆ.ಎಸ್ ಭಗವಾನ್ ವಿವಾದಾತ್ಮಕ ಹೇಳಿದ್ದಾರೆ.
ಸ್ವಾಮಿ ವಿವೇಕಾನಂದರು ಬೌದ್ಧ ಧರ್ಮದ ವಿಚಾರ ಧಾರೆಗಳ ಕುರಿತು ಮಾತನಾಡಲಾರಂಭಿಸಿದ್ದರು. ಆ ಬಳಿಕವೇ ಅವರನ್ನು ಕತ್ತು ಹಿಸುಕಿ ಕೊಂದಿರುವ ಅನುಮಾನವಿದೆ. ಯುವಕರಾಗಿದ್ದ ಸ್ವಾಮಿ ವಿವೇಕಾನಂದರು ಏಕಾಏಕಿ ಸಾವನ್ನಪ್ಪಲು ಸಾಧ್ಯವೇ ಇಲ್ಲ.
ಅದೇ ರೀತಿ ಸಮಾಜ ಸುಧಾರಕರಾಗಿದ್ದ ಬಸವಣ್ಣನವರನ್ನು ಕೊಲೆ ಮಾಡಲಾಗಿದೆ. ಬಸವಣ್ಣನವರ ವಚನ ಚಳವಳಿಯನ್ನು ಸಹಿಸದವರು ಅವರನ್ನೂ ಕೂಡ ಕೊಂದರು. ಬಸವಣ್ಣನವರು ಕೂಡಲ ಸಂಗಮದ ಕಲ್ಯಾಣದಲ್ಲಿ ಐಕ್ಯರಾದರೆಂಬುದು ಶುದ್ದ ಸುಳ್ಳು ಎಂದರು.
ಇನ್ನು ಜಾತಿ ವ್ಯವಸ್ಥೆ ವಿರುದ್ಧ ಚಳುವಳಿ ಹುಟ್ಟು ಹಾಕಿದವರು ಬಸವಣ್ಣನವರು. ಅಂತಹ ಬಸವಣ್ಣ ಏಕೆ ಐಕ್ಯರಾಗಿ ಸಾಯುತ್ತಾರೆ ಎಂದಿದ್ದಾರೆ. ಕೈಲಾಸ, ಸ್ವರ್ಗ ಎಂಬುದು ಏನೂ ಇಲ್ಲಾ. ಇವೆಲ್ಲವೂ ಕೂಡ ಕೇವಲ ಕಲ್ಪನೆಗಳು ಎಂದು ಭಗವಾನ್ ಹೇಳಿದರು.
ಮಹಿಷ ದಸರ ಆಚರಣೆ : ಮಹಿಷ ದಸರಾವನ್ನು ರಾಜ್ಯ ಸರ್ಕಾರವೇ ಆಚರಿಸಬೇಕು ಎಂದು ಪ್ರಗತಿಪರ ಚಿಂತಕ ಸಾಹಿತಿ ಕೆ.ಎಸ್ ಭಗವಾನ್ ಆಗ್ರಹಿಸಿದ್ದಾರೆ. ಮಹಿಷ ದಸರಾ ಪ್ರತಿಷ್ಠಾನ ಸಮಿತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಭಗವಾನ್ ಈ ಹೇಳಿಕೆ ನೀಡಿದ್ದಾರೆ.
ಚಾಮುಂಡಿ ದಸರಾದಂತೆಯೇ ಮಹಿಷ ದಸರಾವನ್ನು ರಾಜ್ಯ ಸರ್ಕಾರವೇ ಆಚರಣೆ ಮಾಡುವುದು ಒಳಿತು. ಆದರೆ ಕಳೆದ ನಾಲ್ಕು ವರ್ಷಗಳಿಂದ ಮಹಿಷ ದಸರಾ ಪ್ರತಿಷ್ಠಾನ ಸಮಿತಿ ಸ್ವಂತ ಖರ್ಚಿನಿಂದ ಆಚರಿಸಿಕೊಂಡು ಬಂದಿದೆ. ದಸರಾ ಜಂಬೂ ಸವಾರಿ ರೀತಿ ಆನೆಯ ಮೇಲೆ ಮಹಿಷನ ಪ್ರತಿಮೆಯನ್ನು ಕೂರಿಸಿ ಮೆರವಣಿಗೆ ಮಾಡಬೇಕು. ಬರುವ ಅಕ್ಟೋಬರ್ 7ರಂದು ನಡೆಯುವ ಮಹಿಷ ದಸರಾವನ್ನು ರಾಜ್ಯ ಸರ್ಕಾರವೇ ಆಚರಿಸಬೇಕು ಎಂದು ಭಗವಾನ್ ಆಗ್ರಹಿಸಿದ್ದಾರೆ. ಅಲ್ಲದೇ ಈ ಮೂಲಕ ಪ್ರಾಚೀನ ಪಕ್ಷಾಚರಣೆಯ ದ್ರಾವಿಡ ಸಂಸ್ಕೃತಿಯನ್ನು ಸರ್ಕಾರ ಪ್ರೋತ್ಸಾಹಿಸಬೇಕು ಎಂದು ಆಗ್ರಹಿಸಿದ ಭಗವಾನ್.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.