
ಬೆಂಗಳೂರು(ನ.20): ಬೆಂಗಳೂರಿನ ಸ್ವಾಮೀಜಿಯೊಬ್ಬರು ತಮ್ಮ ಹುಡುಗರಿಗೆ ಲಂಚ ಕೊಟ್ಟು ಸರ್ಕಾರಿ ಕೆಲಸ ಕೊಡಿಸಲು ಹೋಗಿ ಕೈ ಸುಟ್ಟುಕೊಂಡಿದ್ದಾರೆ.
ವಿಭೂತಿಪುರ ಮಠದ ಶ್ರೀ ಮಹಾಂತಲಿಂಗ ಸ್ವಾಮೀಜಿಗಳು ಈಗ ಹಣ ಕಳೆದುಕೊಂಡು ಪರದಾಟ ನಡೆಸಿದ್ದಾರೆ. ಕಳೆದ ಜೂನ್ನಲ್ಲಿ ಪರಿಚಯವಾದ ಉಮೇಶ್ ಎಂಬಾತನನ್ನು ನಂಬಿದ ಗೂರೂಜಿ, ತಮ್ಮ ಕಡೆಯ ಇಬ್ಬರು ಹುಡುಗರಿಗೆ ಸರ್ಕಾರಿ ಕೆಲಸ ಕೊಡಿಸಬೇಕೆಂದು ಅದಕ್ಕಾಗಿ ಐದು ಲಕ್ಷ ಹಣವನ್ನು ಕೊಟ್ಟಿದ್ದಾರೆ. ಆದರೆ ಕೆಲಸವೂ ಕೊಡಿಸದೇ ಹಣವನ್ನೂ ವಾಪಾಸ್ ಕೊಡದಿದ್ದಾಗ ಗೂರೂಜಿ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ದೂರು ನೀಡಿದ್ದರು.
ವಂಚನೆ ಪ್ರಕರಣದ ಆರೋಪದ ಮೇಲೆ ಸದ್ಯ ಪೊಲೀಸರು ಉಮೇಶ್ನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ವೇಳೆ ಆರೋಪಿ ಉಮೇಶ್ ತಪ್ಪೊಪ್ಪಿಗೆ ಹೇಳಿಕೆ ಕೂಡ ನೀಡಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.