
ನವದೆಹಲಿ (ಜ.25): ಟೈಮ್ಸ್ ನೌ ಸುದ್ದಿವಾಹಿನಿ ಮಾಜಿ ಪತ್ರಕರ್ತ ಅರ್ಣಬ್ ಗೋಸ್ವಾಮಿ ಆರಂಭಿಸಲುದ್ದೇಶಿರುವ ವಾಹಿನಿಗೆ ಹುಟ್ಟುವ ಮುಂಚೆಯೇ ವಿವಾದ ಸುಳಿಯಲ್ಲಿ ಸಿಕ್ಕಿಕೊಂಡಿದೆ.
ಅರ್ನಬ್ ಆರಂಭಿಸಲಿರುವ ರಿಪಬ್ಲಿಕ್ ಚಾನೆಲ್ ಹೆಸರಿನ ಬಗ್ಗೆ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ತಗಾದೆ ಎತ್ತಿದ್ದಾರೆ.
ಲಾಂಛನ ಮತ್ತು ಹೆಸರು (ದುರ್ಬಳಕೆ ತಡೆ) ಕಾಯ್ದೆ-1950 ರ ಪ್ರಕಾರ ರಿಪಬ್ಲಿಕ್ ಪದದ ಬಳಕೆಗೆ ಇತಿಮತಿಗಳಿವೆ. ರಿಪಬ್ಲಿಕ್ ಅಂತಹ ಹೆಸರುಗಳನ್ನು ವ್ಯಾಪಾರದ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ, ಎಂದು ಸ್ವಾಮಿ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.
ರಿಪಬ್ಲಿಕ್ ಹೆಸರನ್ನು ಇಟ್ಟುಕೊಂಡು ವ್ಯಾಪಾರ ನಡೆಸುವುದು ಕಾನೂನಿಗೆ ವಿರುದ್ಧವಾಗಿರುವುದರಿಂದ ಹೆಸರಿಗೆ ಪರವಾನಿಗೆ ನೀಡಬಾರದೆಂದು ಆಗ್ರಹಿಸದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.