ರಾಜ್ಯಾಧ್ಯಕ್ಷರನ್ನು ಬದಲಿಸಿದ ಬಿಜೆಪಿ: ಹಿಂದುಳಿದ ವರ್ಗಕ್ಕೆ ನಾಯಕತ್ವ!

Published : Jul 16, 2019, 07:04 PM ISTUpdated : Jul 16, 2019, 07:07 PM IST
ರಾಜ್ಯಾಧ್ಯಕ್ಷರನ್ನು ಬದಲಿಸಿದ ಬಿಜೆಪಿ: ಹಿಂದುಳಿದ ವರ್ಗಕ್ಕೆ ನಾಯಕತ್ವ!

ಸಾರಾಂಶ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ| ಪ್ರಬಲ ಹಿಂದುಳಿದ ವರ್ಗದ ನಾಯಕನಿಗೆ ಪಟ್ಟ| ಉತ್ತರ ಪ್ರದೇಶ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸ್ವತಂತ್ರ ದೇವ್ ಸಿಂಗ್| ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿದ್ದ ರಾಜ್ಯದ ಒಬಿಸಿ ಸಮುದಾಯ| 

ನವದೆಹಲಿ(ಜು.16): ಮಹತ್ವದ ಬೆಳವಣಿಗೆಯೊಂದರಲ್ಲಿ ಉತ್ತರ ಪ್ರದೇಶ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸ್ವತಂತ್ರ ದೇವ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.

ಈ ಮೊದಲು ರಾಜ್ಯಾಧ್ಯಕ್ಷರಾಗಿದ್ದ ಮಹೇಂದ್ರ ನಾಥ್ ಪಾಂಡೆ ಪ್ರಧಾನಿ ಮೋದಿ ಸಂಪುಟ ಸೇರಿದ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗದ ನಾಯಕರಾದ ಸ್ವತಂತ್ರ ದೇವ್ ಸಿಂಗ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಒಬಿಸಿ ಸಮುದಾಯ ಬಿಜೆಪಿಯನ್ನು ಬೆಂಬಲಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಬಲ ಕುರ್ಮಿ ಸಮುದಾಯಕ್ಕೆ ಸೇರಿದ ಸ್ವತಂತ್ರ ದೇವ್ ಸಿಂಗ್ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಗೆ ಆಯ್ಕೆ ಮಾಡಲಾಗಿದೆ.

ಸಿಎಂ ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಸಾರಿಗೆ ಸಚಿವರಾಗಿರುವ ಸ್ವತಂತ್ರ ದೇವ್ ಸಿಂಗ್, ರಾಜ್ಯದ ಜನಪ್ರಿಯ ಹಿಂದುಳಿದ ವರ್ಗದ ನಾಯಕರಲ್ಲಿ ಮುಂಚೂಣಿಯಲ್ಲಿದ್ದಾರೆ.

ಇದೇ ವೇಳೆ ಮಹಾರಾಷ್ಟ್ರದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಚಂದ್ರಕಾಂತ್ ಪಾಟೀಲ್ ಅವರನ್ನು ನೇಮಿಸಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Mysore: ಗೌರವ ಕೊಡದ ಹೆಂಡ್ತಿ ಕೊಲ್ಲಲು ಸುಪಾರಿ ಕೊಟ್ಟ ಪತಿರಾಯ!
ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?