ಕರ್ನಾಟಕ ಬಳಿಕ ಆಂಧ್ರ ಪ್ರವಾಹ: ಮಾಜಿ ಸಿಎಂ ನಾಯ್ಡು ಮನೆ ಜಲಾವೃತ!

Published : Aug 17, 2019, 10:17 AM IST
ಕರ್ನಾಟಕ ಬಳಿಕ ಆಂಧ್ರ ಪ್ರವಾಹ: ಮಾಜಿ ಸಿಎಂ ನಾಯ್ಡು ಮನೆ ಜಲಾವೃತ!

ಸಾರಾಂಶ

ಪುಲಿಚಿಂತಲಾ ಅಣೆಕಟ್ಟಿನಿಂದ ಯಥೇಚ್ಛವಾಗಿ ನೀರು ಬಿಟ್ಟ ಪರಿಣಾಮ| ಕರ್ನಾಟಕ ಬಳಿಕ ಆಂಧ್ರ ಪ್ರವಾಹ: ಮಾಜಿ ಸಿಎಂ ನಾಯ್ಡು ಮನೆ ಜಲಾವೃತ| 

ಹೈದರಾಬಾದ್‌[ಆ.17]: ಕರ್ನಾಟಕದಲ್ಲಿ ಉಂಟಾದ ಪ್ರವಾಹದಿಂದಾಗಿ ಪುಲಿಚಿಂತಲಾ ಅಣೆಕಟ್ಟಿನಿಂದ ಯಥೇಚ್ಛವಾಗಿ ನೀರು ಬಿಟ್ಟಪರಿಣಾಮ ಆಂಧ್ರಪ್ರದೇಶದ ಕೃಷ್ಣಾ ನದಿ ಪಾತ್ರದಲ್ಲೂ ಪ್ರವಾಹ ಉಂಟಾಗಿದೆ. ಇದರಿಂದ ಅಮರಾವತಿಯ ಉಂಡವಳ್ಳಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಅವರ ಮನೆ ಆವರಣಕ್ಕೆ ನೀರು ನುಗ್ಗಿದೆ.

ಮಳೆಯ ಪ್ರಮಾಣ ಅಧಿಕಗೊಂಡು ಒಳಹರಿವು ಹೆಚ್ಚಾದ ಕಾರಣ ನದಿಗೆ ನೀರು ಬಿಡಲಾಗುತ್ತಿದೆ. ಇದರಿಂದ ಕೃಷ್ಣಾ ಜಿಲ್ಲೆಯ ನದಿ ಪಾತ್ರಗಳ ಗ್ರಾಮಗಳಿಗೆ ನೀರು ನುಗ್ಗುತ್ತಿದೆ.

ಉಂಡವಳ್ಳಿಯ ನದಿ ದಡದ ಮೇಲಿರುವ ನಾಯ್ಡು ಮನೆಗೆ ನೀರು ನುಗ್ಗಿದೆ. ಕೆಳ ಅಂತಸ್ತಿನಲ್ಲಿರುವ ಎಲ್ಲಾ ವಸ್ತುಗಳನ್ನೂ ಮೇಲಿನ ಅಂತಸ್ತಿಗೆ ವರ್ಗಾಯಿಸಲಾಗುತ್ತಿದೆ. ಮನೆಗೆ ನೀರು ನುಗ್ಗದಂತೆ ಮರಳು ಚೀಲಗಳನ್ನು ಬಳಸಿ ತಡೆಗೋಡೆ ನಿರ್ಮಿಸಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಧ್ಯೆ ಖುರ್ಚಿ ಕಾದಾಟ ಇಲ್ಲ: ಬಸವರಾಜ ರಾಯರೆಡ್ಡಿ
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!