
ಸಿರಿಯಾದಲ್ಲಿ ನಡೆಯುತ್ತಿರುವ ಯುದ್ದದಲ್ಲಿ ನಾಗರೀಕರು ಸಾವಿರಾರು ಸಂಖ್ಯೆಯಲ್ಲಿ ಸಾವಿನ ದವಡೆಗೆ ಸಿಲುಕುತ್ತಿದ್ದರೆ, ಕೆಲವರು ದೇಶವನ್ನು ತೊರೆಯುತ್ತಿದ್ದಾರೆ. ಅಲ್ಲಿಯೇ ಉಳಿದ ಹಲವರು ನಡೆಯುತ್ತಿರುವ ಯುದ್ದಕ್ಕೆ ಸಾಕ್ಷಿಯಾಗುತ್ತಿದ್ದಾರೆ.
ಯಾವುದನ್ನು ಅರಿದ ಸಾವಿರಾರು ಸಂಖ್ಯೆ ಮುಗ್ಧ ಮಕ್ಕಳು ಸಹ ಈ ದುರಂತದಲ್ಲಿ ಸಾವನ್ನಪ್ಪುತ್ತಿದ್ದು, ಸದ್ಯ ನಡೆಯುತ್ತಿರುವ ರಾಸಯನಿಕ ದಾಳಿಯಿಂದ ಬದುಕಿ ಬಂದ ಪುಟ್ಟ ಬಾಲಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ತನ್ನನ್ನು ರಕ್ಷಸಿ ಚಿಕಿತ್ಸೆ ನೀಡುತ್ತಿದ್ದ ನರ್ಸ್ ನನ್ನು ಆ ಬಾಲಕ ಕೇಳವ ಪ್ರಶ್ನೆ ಮನ ಕಲಕುವಂತಿದೆ.
ಮೊದಲಿಗೆ ದಾಳಿಯ ಚಿತ್ರಣ ಬಿಡಿಸಿಡುವ ಬಾಲಕ ತನ್ನ ಸಹೋದರರೂ ದಾಳಿಯಲ್ಲಿ ಸಿಲುಕಿದ್ದಾರೆ ಎಂದು ಹೇಳುವುದಲ್ಲದೇ 'ನಾನು ಸಾಯುತ್ತೇನೆಯೇ' ಎಂದು ಹೇಳುವ ದೃಶ್ಯ ಕಣ್ಣಂಚಲಿ ನೀರು ತರಿಸುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.