
ಕೋಲಾರ: ಶಾಸಕ ಜಮೀರ್ ಅಹಮದ್’ಗೆ ತಾಕತ್ತಿದ್ದರೆ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರ ಬಿಟ್ಟು ರಾಜ್ಯದ ಇತರ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲಿ ಎಂದು ವಿಧಾನ ಪರಿಷತ್ ಸದಸ್ಯ ಶರವಣ ಸವಾಲೆಸೆದಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮೀರ್ ಅವರನ್ನು ಸೋಲಿಸಲು ರೇವಣ್ಣ ಬೇಕಾಗಿಲ್ಲ, ನನ್ನಂಥ ಸಾಮಾನ್ಯ ಕಾರ್ಯಕರ್ತ ಸಾಕು ಎಂದು ಪುನರುಚ್ಚರಿಸಿದರು.
ಚಾಮರಾಜಪೇಟೆ ವಿಧಾನಸಭಾ ಚುನಾವಣೆಗೆ ನೀವು ಸ್ಪರ್ಧಿಸುತ್ತಿರಾ ಎಂಬ ಪ್ರಶ್ನೆಗೆ, ‘ಪಕ್ಷದ ವರಿಷ್ಠರು ಆದೇಶ ನೀಡಿದರೆ ರಾಜ್ಯದ ಯಾವುದೇ ಕ್ಷೇತ್ರದಲ್ಲಾದರೂ ಸ್ಪರ್ಧಿಸುತ್ತೇನೆ ಎಂದು ಶರವಣ ಉತ್ತರಿಸಿದರು.
ಶಾಸಕ ಜಮೀರ್ ಆಹಮದ್ ಅವರನ್ನು ಜೆಡಿಎಸ್ನಿಂದ ಹೊರಹಾಕಲಾಗಿದೆ. ಪಕ್ಷ ಹಾಗೂ ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ. ಗೌಡರ ಬಗ್ಗೆ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿರಬೇಕು. ಯಾರೇ ಹಗುರವಾಗಿ ಮಾತನಾಡಿದರು ಬೆಲೆ ತೆರೆಯಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.