ಶೋಭಾ ಕರಂದ್ಲಾಜೆ'ಗೆ ಖಡಕ್ ಉತ್ತರ ಕೊಟ್ಟ ದಿನೇಶ್ ಗುಂಡೂರಾವ್ ಪತ್ನಿ

Published : Jul 13, 2017, 12:39 AM ISTUpdated : Apr 11, 2018, 12:49 PM IST
ಶೋಭಾ ಕರಂದ್ಲಾಜೆ'ಗೆ ಖಡಕ್ ಉತ್ತರ ಕೊಟ್ಟ ದಿನೇಶ್ ಗುಂಡೂರಾವ್ ಪತ್ನಿ

ಸಾರಾಂಶ

ಎರಡು ಮಕ್ಕಳ ತಾಯಿಯಾಗಿ ಕುಮಾರಿ ಶೋಭಾ ಕರದ್ಲಾಜೆ ಅವರು ತಮ್ಮ ರಾಜಕೀಯ ಲಾಭಗಳಿಗಾಗಿ ನಮ್ಮ ಖಾಸಗಿ ಬದುಕಿನೊಳಗೆ ಪ್ರವೇಶಿಸುವುದನ್ನು ಬಲವಾಗಿ ಖಂಡಿಸುತ್ತೇನೆ.  ನಾವು ಭಾರತ ಪ್ರತಿಬಿಂಬಿಸುತ್ತಿರುವ ವೈವಿಧ್ಯತೆಯ ಏಕತೆಯನ್ನು ಪ್ರತಿನಿಧಿಸುತ್ತಿದ್ದೇವೆ. ಗೃಹಿಣಿಯಾಗಿ ಹಾಗೂ

ಬೆಂಗಳೂರು(ಜು.13): ಕಾಂಗ್ರೆಸ್ ಕಾರ್ಯಾಕಾರಿ ಅಧ್ಯಕ್ಷರ ಪತ್ನಿ ದಲಿತರೆ? ಕಾಂಗ್ರೆಸ್ ಕಾರ್ಯಾಧ್ಯಕ್ಷರು ಯಾರನ್ನು ಮದುವೆ ಆಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಅಲ್ಲವೇ ಎಂಬ ಬಿಜೆಪಿ ನಾಯಕಿ ಶೋಭಾ ಕರದ್ಲಾಜೆ ಪ್ರಶ್ನೆಗೆ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್  ತಮ್ಮ ಫೇಸ್'ಬುಕ್ ಪುಟದಲ್ಲಿ ಖಡಕ್ ಉತ್ತರ ನೀಡಿದ್ದಾರೆ.

'ನಾನು ಮುಸ್ಲಿಂ ಜನಾಂಗದಲ್ಲಿ ಜನಿಸಿರುವುದು ಹಾಗೂ ನನ್ನ ಪತಿ ದಿನೇಶ್ ಗುಂಡೂರಾವ್ ಅವರು ಬ್ರಾಹ್ಮಣರು ಎಂಬುದು ಗೋಪ್ಯವಾದ ವಿಷಯವೇನಲ್ಲ. ನಾವು ವಿವಾಹವಾದ 2 ದಶಕದಿಂದ ಸಂತೋಷದಿದ್ದೇವೆ ಅಲ್ಲದೆ ಧರ್ಮದ ಸಮಸ್ಯೆಗಳು ಬಗ್ಗೆ ಒಮ್ಮೆಯೂ ನಮ್ಮ ಮನಸ್ಸನ್ನು ದಾಟಿಲ್ಲ. ನಾವಿಬ್ಬರೂ ಪರಸ್ಪರ ಧರ್ಮಾಂತರವಾಗದೆ ಸಂಪೂರ್ಣವಾಗಿ ಸಮತೋಲಿತವಾಗಿ ಜೀವನ ನಡೆಸುತ್ತಿದ್ದೇವೆ. ಎಲ್ಲ ಧರ್ಮಗಳನ್ನು ಗೌರವಿಸುವುದರ ಜೊತೆ ಆಚರಿಸುವುದು ನಮಗೆ ಅಭ್ಯಾಸವಾಗಿದೆ.

ನಾವು ಭಾರತ ಪ್ರತಿಬಿಂಬಿಸುತ್ತಿರುವ ವೈವಿಧ್ಯತೆಯ ಏಕತೆಯನ್ನು ಪ್ರತಿನಿಧಿಸುತ್ತಿದ್ದೇವೆ. ಗೃಹಿಣಿಯಾಗಿ ಹಾಗೂ  ಎರಡು ಮಕ್ಕಳ ತಾಯಿಯಾಗಿ ಕುಮಾರಿ ಶೋಭಾ ಕರದ್ಲಾಜೆ ಅವರು ತಮ್ಮ ರಾಜಕೀಯ ಲಾಭಗಳಿಗಾಗಿ ನಮ್ಮ ಖಾಸಗಿ ಬದುಕಿನೊಳಗೆ ಪ್ರವೇಶಿಸುವುದನ್ನು ಬಲವಾಗಿ ಖಂಡಿಸುತ್ತೇನೆ.

ಸಂಪೂರ್ಣವಾಗಿ ಸಂಬಂಧವಿಲ್ಲದ ವಿಷಯದಲ್ಲಿ ನಮ್ಮ ಕುಟುಂಬವನ್ನು ವಿಡಂಬನಾತ್ಮಕವಾಗಿ ಅವರು ಉಲ್ಲೇಖಿಸಿದ್ದಾರೆ. ಅವರಿಗೆ ಸಮಾಜದಲ್ಲಿ ಕೋಮು ಅಸಂಗತತೆ ಸೃಷ್ಟಿಸುವುದು ಅವರ ಏಕೈಕ ಉದ್ದೇಶವೆಂದು ಸೂಚಿಸುತ್ತದೆ.ಕುಮಾರಿ ಶೋಭಾ ಕರಂದ್ಲಾಜೆಯಂಥ ನಾಯಕಿಯ ನಿಲುವು ಇಂತಹ ಮಟ್ಟಕ್ಕೆ ಇಳಿದಿರುವುದು ನಿಜವಾಗಿಯು ದುರಾದೃಷ್ಟಕರ' ಎಂದು ತಿಳಿಸಿದ್ದಾರೆ.

ಶೋಭಾ ಅವರ ಹೇಳಿಕೆಯನ್ನು ದಿನೇಶ್ ಗುಂಡೂರಾವ್ ಅವರು ಕೂಡ ಖಂಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಮನೂರು ಶಿವಶಂಕರಪ್ಪ ನಿಧನ; ತಿರುಪತಿ ಪ್ರಯಾಣ ರದ್ದು, ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್ ಕುಟುಂಬ ತಕ್ಷಣ ವಾಪಸ್!
ಹೊಸಕೋಟೆಗೆ ಕಾಂಗ್ರೆಸ್‌ ಅವಧಿಯಲ್ಲೇ ಮೆಟ್ರೋ, ಶೀಘ್ರದಲ್ಲೇ ಸಿಗಲಿದೆಯೇ ಸಿಹಿ ಸುದ್ದಿ, ಯಾವ ಮಾರ್ಗ ವಿಸ್ತರಣೆ?