
ದಾವಣಗೆರೆ (ಡಿ.15): ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಕಳೆದ ವರ್ಷವಷ್ಟೇ ನೂತನ ಮಿನಿವಿಧಾನಸೌಧ ಲೋಕಾರ್ಪಣೆಗೊಂಡು ಈಗ ಸಾರ್ವಜನಿಕ ಸೇವೆ ನೀಡುತ್ತಿದೆ. ಆದರೆ ಇದೀಗ ಈ ತಾಲೂಕಾ ಕಚೇರಿಗೆ ಮತ್ತೊಂದು ಮಿನಿವಿಧಾನಸೌಧದ ಕಚೇರಿಯ ಅವಶ್ಯಕತೆಯಿದೆ ಎಂದು ತಹಸೀಲ್ದಾರ್ ಡಿಸಿಗೆ ಪತ್ರ ಬರೆದಿದ್ದಾರೆ.
ಪಟ್ಟಣದಲ್ಲಿ ಹಲವು ಕಡೆ 14 ಕಚೇರಿಗಳು ಇವೆ. ಅವುಗಳು ಮಿನಿವಿಧಾನಸೌಧಕ್ಕೆ ಸ್ಥಳಾಂತರ ಮಾಡಿದ್ರೆ ಜಾಗ ಸಾಲುವುದಿಲ್ಲ. ಆ ಕಾರಣದಿಂದ ಅಮರಾವತಿ ಬಡಾವಣೆಯಲ್ಲಿ ಕರ್ನಾಟಕ ಗೃಹ ಮಂಡಳಿ ಅಭಿವೃದ್ಧಿಪಡಿಸಿರುವ ಸಿ ಎ ನಿವೇಶನಗಳನ್ನು ನೀಡಬೇಕೆಂದು ತಹಶೀಲ್ದಾರ್ ಡಿಸಿ ಬಳಿ ಮನವಿ ಮಾಡಿದ್ದಾರೆ.
ಅಧಿಕಾರಿಗಳು ಹೀಗೆ ಡಿಸಿ ಬಳಿ ಬೇಡಿಕೆ ಇಡಲು ಸ್ಥಳೀಯ ಶಾಸಕ ಹೆಚ್.ಎಸ್.ಶಿವಶಂಕರ್ ಕೈವಾಡಯಿದೆ.
ಶಾಸಕರು ನಾಗರಿಕ ನಿವೇಶನದ ಹೆಸರಿನಲ್ಲಿ ಗೋಲ್ಮಾಲ್ ಮಾಡಲು ಹೊರಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.