
ನವದೆಹಲಿ (ಡಿ. 24): ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ತೋರಿಸಿಕೊಡುತ್ತೇವೆ ಎಂದು ನೆರೆಯ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಹೇಳಿಕೆಗೆ ಬಾಲಿವುಡ್ ನಟ ನಾಸಿರು ದ್ದೀನ್ ಶಾ ಅವರು ತಿರುಗೇಟು ನೀಡಿದ್ದಾರೆ.
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಅವರು ತಮ್ಮ ದೇಶದ ಸಮಸ್ಯೆಗಳನ್ನು ಮೊದಲು ಪರಿಹರಿಸಿಕೊಳ್ಳಲಿ. ನೆರೆಯ ರಾಷ್ಟ್ರ ಅಥವಾ ತಮಗೆ ಸಂಬಂಧಿಸಿಲ್ಲದ ವಿಚಾರದ ಬಗ್ಗೆ ಮೌನವಾಗಿದ್ದರೆ ಒಳಿತು ಎಂದು ಇಮ್ರಾನ್ ಅವರಿಗೆ ನಾಸಿರುದ್ದೀನ್ ಶಾ ಅವರು ಸಲಹೆ ನೀಡಿದ್ದಾರೆ.
ಮುಂಬೈ ದಾಳಿ ನಮ್ಮವರೇ ಮಾಡಿದ್ದು: ಇದನ್ನೇ ಅಲ್ವೇ ಎಲ್ರೂ ಹೇಳಿದ್ದು?
ಈ ಬಗ್ಗೆ ಸಂಡೆ ಎಕ್ಸ್ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ನಾಸಿರುದ್ದೀನ್ ಶಾ ಅವರು, ‘ಇಮ್ರಾನ್ ಅವರು ತಮಗೆ ಸಂಬಂಧಿಸಿಲ್ಲದ ವಿಚಾರದ ಬಗ್ಗೆ ಮಾತನಾಡುವ ಬದಲಿಗೆ ತಮ್ಮ ದೇಶದ ಸಮಸ್ಯೆಗಳ ಬಗ್ಗೆ ಮೊದಲು ಗಮನ ಹರಿಸಲಿ’ ಎಂದು ಇಮ್ರಾನ್ಗೆ ಟಾಂಗ್ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.