
ಚೆನ್ನೈ[ಸೆ.30] ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ಕುಟುಂಬವೊಂದು ಖಾಸಗಿ ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದು ತಾಂಜಾವೂರಿನ ಆಸ್ಪತ್ರೆ ರೋಗಿ ಸತ್ತು ಮೂರು ದಿನವಾಗಿದ್ದರೂ ಹೆಚ್ಚುವರಿ ಹಣ ಪಡೆದುಕೊಂಡಿದೆ ಎಂದಿದೆ.
ಸಾವಿಗೀಡಾದ ಎನ್ ಶೇಖರ್[55] ಎಂಬುವರ ಪುತ್ರ ಸುಭಾಷ್ ತಾಂಜಾವೂರಿನ ಪೊಲೀಸರಿಗೆ ದೂರು ನೀಡಿದ್ದು ನಿಧನವಾದ ಮೇಲೂ ತಂದೆಯ ಪಾರ್ಥೀವ ಶರೀರವನ್ನು ಆಸ್ಪತ್ರೆ ಮೂರು ದಿನ ಇಟ್ಟುಕೊಂಡಿದೆ ಎಂದು ಆರೋಪಿಸಿದ್ದಾರೆ.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ನನ್ನ ತಂದೆಯನ್ನು ಸೆ.10 ರಂದು ಆಸ್ಪತ್ರೆಗೆ ದಾಖಲಿಸಿದ್ದೇವು. 5 ಲಕ್ಷ ರೂ. ಬಿಲ್ ಮಾಡಿರುವ ಆಸ್ಪತ್ರೆ ಹೆಚ್ಚಿನ ಚಿಕಿತ್ಸೆಗೆ ಮತ್ತೆ ಮೂರು ಲಕ್ಷ ರೂ. ಬೇಕು ಎಂದು ಬೇಡಿಕೆಯಿಟ್ಟಿತು.
ಇದಾದ ಮೇಲೆ ಅನಿವಾರ್ಯವಾಗಿ ನಮ್ಮ ತಂದೆಯವರನ್ನು ತಾಂಜಾವೂರು ಮೆಡಿಕಲ್ ಕಾಲೇಜಿಗೆ ಶಿಫ್ಟ್ ಮಾಡಿದೆವು. ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ನಿಮ್ಮ ತಂದೆ ನಿಧನರಾಗಿ ಮೂರು ದಿನ ಕಳೆದಿದೆ ಎಂದು ದೃಢೀಕರಿಸಿದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆದರೆ ಈ ಆರೋಪ ತಳ್ಳಿಹಾಕಿರುವ ಆಸ್ಪತ್ರೆ ನಮ್ಮ ಬಳಿ ಎಲ್ಲ ದಾಖಲೆಗಳಿವೆ. ಆಸ್ಪತ್ರೆಗೆ ಕೆಟ್ಟ ಹೆಸರು ತರಲು ಹೀಗೆ ಮಾಡಲಾಗುತ್ತಿದೆ ಎಂದು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.