ಹಾಲಿ ಸಚಿವನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್..!

Published : Jan 07, 2019, 09:20 PM IST
ಹಾಲಿ ಸಚಿವನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್..!

ಸಾರಾಂಶ

1998ರಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದ ಹಾಲಿ ಸಚಿವನಿಗೆ 3 ವರ್ಷ ಜೈಲು ಹಾಗೂ 10,500 ರು. ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರು ಆ ಸಚಿವ?

ಚೆನ್ನೈ, [ಜ.07]:  ತಮಿಳುನಾಡಿನ ಹಾಲಿ ಯುವಜನ ಕಲ್ಯಾಣ ಮತ್ತು ಕ್ರೀಡಾ ಸಚಿವ ಬಾಲಕೃಷ್ಣ ರೆಡ್ಡಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. 

1998ರಲ್ಲಿ ಎಐಎಡಿಎಂಕೆ ಪಕ್ಷ ಕೈಗೊಂಡಿದ್ದ ಪ್ರತಿಭಟನೆ ವೇಳೆ ಕಲ್ಲು ತೂರಾಟ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಬಾಲಕೃಷ್ಣ ರೆಡ್ಡಿಗೆ 3 ವರ್ಷ ಜೈಲು ಹಾಗೂ 10,500 ರು. ದಂಡ ವಿಧಿಸಿ ಆದೇಶ ಹೊರಡಿಸಿದೆ.

1998 ರಲ್ಲಿ ಎಐಎಡಿಎಂಕೆ ಪಕ್ಷ ಕೈಗೊಂಡಿದ್ದ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಸಾರ್ವಜನಿಕ ಆಸ್ತಿ, ಪಾಸ್ತಿಗೆ ಹಾನಿ ಮಾಡಿರುವ ಸಂಬಂಧ ಬಾಲಕೃಷ್ಣ ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. 

ಪ್ರತಿಭಟನೆ ವೇಲೆ ಬಾಲಕೃಷ್ಣ ರೆಡ್ಡಿ ಅಪರಾಧ ಚಟುವಟಿಕೆಯಲ್ಲಿ ತೊಡಗಿರೋದು ಸಾಬೀತಾದ ಹಿನ್ನೆಲೆಯಲ್ಲಿ ಇಂದು [ಸೋಮವಾರ] ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಇನ್ನು  ಬಾಲಕೃಷ್ಣ ರೆಡ್ಡಿ ಅವರು ಕೋರ್ಟ್​ ತೀರ್ಪು ಪ್ರಶ್ನಿಸಿ ನಾಳೆ (ಸೋಮವಾರ) ಮದ್ರಾಸ್​ ಹೈಕೋರ್ಟ್​ ಮೆಟ್ಟಿಲೇರಲಿರುವ ಸಾಧ್ಯತೆಗಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?