ರಾಜಾತಿಥ್ಯಕ್ಕೆ ಲಂಚ ನೀಡಿಕೆ ಆರೋಪ: ಶಶಿಕಲಾ ವಿರುದ್ಧ ತನಿಖೆಗೆ ಆಗ್ರಹ

Published : Jul 13, 2017, 07:23 PM ISTUpdated : Apr 11, 2018, 01:08 PM IST
ರಾಜಾತಿಥ್ಯಕ್ಕೆ ಲಂಚ ನೀಡಿಕೆ ಆರೋಪ: ಶಶಿಕಲಾ ವಿರುದ್ಧ ತನಿಖೆಗೆ ಆಗ್ರಹ

ಸಾರಾಂಶ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಎಂಕೆ ವಿರೋಧ ಪಕ್ಷದ ನಾಯಕ ಎಂ.ಕೆ. ಸ್ಟಾಲಿನ್, ಎಐಎಡಿಎಂಕೆ ಲಂಚ ನೀಡಿಕೆ ಪ್ರಕರಣ ಇದೇ ಮೊದಲಲ್ಲ. ಮತದಾರರನ್ನು ಒಳಗೊಂಡಂತೆ ಚುನಾವಣಾ ಆಯೋಗಕ್ಕೂ ಅವರು ಲಂಚ ನೀಡಿದ್ದರು. ಈಗ ಸೆರಮನೆ ಸಿಬ್ಬಂದಿಗೆ ನೀಡುತ್ತಿದ್ದಾರೆ ಅಷ್ಟೆ'

ಚೆನ್ನೈ(ಜು.13): ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ವಿ.ಶಶಿಕಲಾ ಸೆರೆಮನೆಯಲ್ಲಿ 2 ಕೋಟಿ ಕೊಟ್ಟು ರಾಜಾತಿಥ್ಯ ಪಡೆಯುತ್ತಿರುವ ಬಗ್ಗೆ ರಾಜ್ಯ ಕಾರಾಗೃಹಗಳ ಡಿಐಜಿ ಡಿ.ರೂಪ ಅವರು ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ತಮಿಳುನಾಡು ವಿರೋಧ ಪಕ್ಷ ಡಿಎಂಕೆ ಆಗ್ರಹಿಸಿದೆ.

ಶಶಿಕಲಾಗೆ ವಿಶೇಷ ಕೊಠಡಿ ಸೇರಿದಂತೆ ಹಲವು ಸೌಲಭ್ಯ ನೀಡಲಾಗಿದ್ದು, ಇದರಲ್ಲಿ ಜೈಲು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಡಿ.ರೂಪ ಅವರು ಮಾಡಿರುವ ಆರೋಪ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಎಂಕೆ ವಿರೋಧ ಪಕ್ಷದ ನಾಯಕ ಎಂ.ಕೆ. ಸ್ಟಾಲಿನ್, ಎಐಎಡಿಎಂಕೆ ಲಂಚ ನೀಡಿಕೆ ಪ್ರಕರಣ ಇದೇ ಮೊದಲಲ್ಲ. ಮತದಾರರನ್ನು ಒಳಗೊಂಡಂತೆ ಚುನಾವಣಾ ಆಯೋಗಕ್ಕೂ ಅವರು ಲಂಚ ನೀಡಿದ್ದರು. ಈಗ ಸೆರಮನೆ ಸಿಬ್ಬಂದಿಗೆ ನೀಡುತ್ತಿದ್ದಾರೆ ಅಷ್ಟೆ'

ಈ ಬಗ್ಗೆ ಎಲ್ಲ ಹಂತಗಳಿಂದ ಸಮಗ್ರವಾಗಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಈ ನಡುವೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಲಂಚ ನೀಡಿಕೆಯ ಪ್ರಕರಣಗಳ ಬಗ್ಗೆ ಈಗಾಗಲೇ ತನಿಖೆಗೆ ಆದೇಶಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸಕೋಟೆಗೆ ಕಾಂಗ್ರೆಸ್‌ ಅವಧಿಯಲ್ಲೇ ಮೆಟ್ರೋ, ಶೀಘ್ರದಲ್ಲೇ ಸಿಗಲಿದೆಯೇ ಸಿಹಿ ಸುದ್ದಿ, ಯಾವ ಮಾರ್ಗ ವಿಸ್ತರಣೆ?
ಮೀಸಲಾತಿ ಯಾರಪ್ಪನ ಸ್ವತ್ತಲ್ಲ; ಕುರುಬರ ST ಸೇರ್ಪಡೆ ವಿಚಾರ, ವಿಎಸ್ ಉಗ್ರಪ್ಪ ಮಹತ್ವದ ಹೇಳಿಕೆ!