ತಮಿಳುನಾಡು ಬಂದ್ : ರಾಜ್ಯದಿಂದ ಬಸ್ ಸಂಚಾರ ಸ್ಥಗಿತ

Published : Apr 05, 2018, 10:23 AM ISTUpdated : Apr 14, 2018, 01:13 PM IST
ತಮಿಳುನಾಡು ಬಂದ್ : ರಾಜ್ಯದಿಂದ ಬಸ್ ಸಂಚಾರ ಸ್ಥಗಿತ

ಸಾರಾಂಶ

ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಒತ್ತಾಯಿಸಿ ಇಂದು ತಮಿಳುನಾಡು ಬಂದ್ ಗೆ ಕರೆ ನೀಡಲಾಗಿದೆ.

ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಒತ್ತಾಯಿಸಿ ಇಂದು ತಮಿಳುನಾಡು ಬಂದ್ ಗೆ ಕರೆ ನೀಡಲಾಗಿದೆ.

 ತಮಿಳುನಾಡಿನಲ್ಲಿ ಭಾರಿ ಮಟ್ಟದಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ಕರ್ನಾಟಕದಿಂದ  ತಮಿಳುನಾಡಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್​ಗಳ ಸಂಚಾರ ಬಹುತೇಕ ಸ್ಥಗಿತವಾಗಿದೆ.  ರಾಜ್ಯದ ಆನೇಕಲ್ ಡಿಪೋದಿಂದ ದಿನನಿತ್ಯ 20 ಕ್ಕೂ ಹೆಚ್ಚು ಬಸ್ಸುಗಳು ತಮಿಳುನಾಡಿನ ಹೊಸೂರಿಗೆ ತೆರಳುತ್ತಿದ್ದವು. ಅವುಗಳನ್ನೂ ಸಹ ಮುಂಜಾಗೃತವಾಗಿ ನಿಲ್ಲಿಸಲಾಗಿದೆ.

ಇನ್ನು ತಮಿಳುನಾಡಿನ ಪ್ರತಿಭಟನಾಕಾರರು ಕರ್ನಾಟಕದ ಗಡಿ ಅತ್ತಿಬೆಲೆ ಗಡಿ ಭಾಗದಲ್ಲಿ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಇದಕ್ಕೆ ವಿರುದ್ಧವಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜು ಹಾಗೂ ಕಾರ್ಯಕರ್ತರು ಅತ್ತಿಬೆಲೆ ಗಡಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಹೀಗಾಗಿ ಗಡಿ ಭಾಗದಲ್ಲಿ ಎರಡೂ ರಾಜ್ಯಗಳ ಪೊಲೀಸರು ಸೂಕ್ತ ಭದ್ರತೆ ಕೈಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!