
ಬೆಂಗಳೂರು (ಏ. 06): ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ತಮಿಳರು ಬಿಗಿಪಟ್ಟು ಹಿಡಿದಿದ್ದಾರೆ. ಐಪಿಎಲ್ ಕ್ರಿಕೆಟ್ ಮ್ಯಾಚ್ ಬಹಿಷ್ಕರಿಸುವ ಬೆದರಿಕೆಯೊಡ್ಡಿದ್ದಾರೆ ರೈತರು. ತಿರುಚಿಯಲ್ಲಿ ಮರಳಲ್ಲಿ ಮಲಗಿ ರೈತರು ಪ್ರತಿಭಟನೆ ನಡೆಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ತಕ್ಷಣವೇ ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು. ತಮಿಳುನಾಡಿಗೆ ಯಾವುದೇ ರೀತಿಯಲ್ಲಿ ಅನ್ಯಾಯ ಮಾಡಬಾರದು. ಐಪಿಎಲ್ ಮ್ಯಾಚ್ಗಿಂತ ತಮಿಳುನಾಡು ರೈತರೇ ಮುಖ್ಯ. ನಿರ್ವಹಣಾ ಮಂಡಳಿ ರಚನೆಯಾಗದಿದ್ದರೆ IPL ಮ್ಯಾಚ್ ನಡೆಯೋಕೆ ಬಿಡಲ್ಲ ಎಂದು ತಿರುಚಿಯಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ವಿರುದ್ಧ ಕಿಡಿಕಾರಿದ್ದಾರೆ.
ನಾಳೆಯಿಂದ ಐಪಿಎಲ್ ಮ್ಯಾಚ್ ಶುರುವಾಗುತ್ತೆ. ತಮಿಳುನಾಡಿನಲ್ಲಿ 8 ಮ್ಯಾಚ್ ನಡೆಯುತ್ತದೆ. ಒಂದು ನಿರ್ವಹಣಾ ಮಂಡಳಿ ರಚಿಸದಿದ್ದರೆ ಐಪಿಎಲ್’ಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.