ಚೆನ್ನೈ(ಅ.07): ತಮಿಳುನಾಡು ಸಿಎಂ ಜೆ.ಜಯಲಲಿತಾ ಅನಾರೋಗ್ಯ ಹಿನ್ನೆಲೆಯಲ್ಲಿ ಹಿರಿಯ ಸಚಿವರು ದಿಢೀರ್ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರನ್ನು ಭೇಟಿಯಾಗಿದ್ಧಾರೆ.
ಸಚಿವರಾದ ಪನೀರ್ ಸೆಲ್ವಂ, ಎಡಪ್ಪಾಡಿ ಕೆ. ಪಳನಿಸ್ವಾಮಿ, ಮುಖ್ಯಕಾರ್ಯದರ್ಶಿ ರಾಮಮೋಹನ್ ರಾವ್ ಭೇಟಿಯಾಗಿದ್ಧಾರೆ. ಹೆಚ್ಚಿನ ಚಿಕಿತ್ಸೆಗೆ ಜಯಲಲಿತಾರನ್ನು ವಿದೇಶಕ್ಕೆ ಕರೆದೊಯ್ದುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಈ ಕುರಿತು ರಾಜ್ಯಪಾಲರ ಜೊತೆ ಸಚಿವರು ಸಮಾಲೋಚನೆ ನಡೆಸಿದರು ಎನ್ನಲಾಗಿದೆ.