
ಚೆನ್ನೈ(ಜ. 09): ಕಾವೇರಿ ನೀರಿನ ವಿಚಾರದಲ್ಲಿ ಪದೇ ಪದೇ ಕರ್ನಾಟಕಕ್ಕೆ ಕ್ಯಾತೆ ತೆಗೆಯುತ್ತಿರುವ ತಮಿಳುನಾಡು ಇದೀಗ ಮತ್ತೊಂದು ತಗಾದೆ ತೆಗೆದಿದೆ. ಕರ್ನಾಟಕದಿಂದ ತನಗೆ 2,480 ಕೋಟಿ ರೂ ಪರಿಹಾರ ಸಿಗಬೇಕೆಂದು ಆಗ್ರಹಿಸಿದೆ. ಸುಪ್ರೀಂಕೋರ್ಟ್ ಆದೇಶ ನೀಡಿದರೂ ಕರ್ನಾಟಕವು ತಮಿಳುನಾಡಿಗೆ ನಿಗದಿತ ಪ್ರಮಾಣದಲ್ಲಿ ಕಾವೇರಿ ನೀರು ಬಿಡುತ್ತಿಲ್ಲ. ಇದು ಸರ್ವೋಚ್ಚ ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಿದೆ. ಜೊತೆಗೆ, ಕರ್ನಾಟಕದಿಂದ ತನಗೆ ಸಿಗಬೇಕಾದ ನೀರು ಬರದೇ ಹೋಗಿದ್ದರಿಂದ ತಮಿಳುನಾಡಿಗೆ ಸಾಕಷ್ಟು ನಷ್ಟವಾಗಿದೆ. ಹೀಗಾಗಿ, ಪರಿಹಾರ ಒದಗಿಸಿಕೊಡಬೇಕು ಎಂದು ತಮಿಳುನಾಡು ರಾಜ್ಯವು ಸುಪ್ರೀಂಕೋರ್ಟ್'ಗೆ ಮನವಿ ಮಾಡಿಕೊಂಡಿದೆ. ಇದೇ ವೇಳೆ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳು ಇನ್ನೊಂದು ವಾರದಲ್ಲಿ ಸಾಕ್ಷ್ಯಗಳ ಪಟ್ಟಿ ಸಲ್ಲಿಸುವಂತೆ ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.