
ಧಾರವಾಡ(ಜು.19): ಶಾಲಾ SDMC ಗಳು ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತವೆ ಎಂಬ ನಂಬಿಕೆಯಿಂದ ಶೂ ಹಾಗೂ ಸಮವಸ್ತ್ರ ಖರೀದಿಯಲ್ಲಿ ಪೋಷಕರ ಸಹಭಾಗಿತ್ವಕ್ಕೆ ಅವಕಾಶ ನೀಡಲಾಗಿತ್ತು. ಆದರೆ SDMCಗಳಲ್ಲಿನ ಪೋಷಕರೇ ಅವ್ಯವಹಾರದಲ್ಲಿ ಭಾಗಿಯಾಗಿದ್ದಕ್ಕೆ, ಇದೀಗ ಹೊಸ ನೀತಿ ರೂಪಿಸಲು ಚಿಂತನೆ ನಡೆಸುತ್ತಿದ್ದೇವೆ ಅಂತ ಶಿಕ್ಷಣ ಸಚಿವ ತನ್ವೀರ್ ಸೇಠ್ ಅಭಿಪ್ರಾಯಪಟ್ಟಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಹಾವೇರಿಯಲ್ಲಿ ಸುವರ್ಣನ್ಯೂಸ್ ವರದಿಯಿಂದ ಶೂ- ಸಮವಸ್ತ್ರ ಖರೀದಿ ಅವ್ಯವಹಾರ ಬೆಳಕಿಗೆ ಬಂದಿದೆ. ಇದಕ್ಕೆ ಪ್ರತಿಯಾಗಿ 8 ಮುಖ್ಯಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಇದೀಗ ಶೂ ಹಾಗೂ ಸಮವಸ್ತ್ರ ಖರೀದಿ ಅಕ್ರಮ ತಡೆಗಟ್ಟಲು ಹೊಸ ನೀತಿ ರೂಪಿಸಲು ಅಧಿಕಾರಿಗಳ ಮಟ್ಟದಲ್ಲಿ ಸಭೆ ನಡೆಸಿದ್ದೇನೆ. ಅಲ್ಲದೇ ಈಗಾಗಲೇ ಕೇಂದ್ರಸ್ಥಾನದಿಂದ ಪಠ್ಯಪುಸ್ತಕಗಳು ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಿಗೆ ರವಾನೆಯಾಗಿದ್ದು, ಶೀಘ್ರವೇ ಪಠ್ಯಪುಸ್ತಕ ಸಮಸ್ಯೆ ಬಗೆಹರಿಯುವುದಾಗಿ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.