ಎಲ್ಲ ಶಾಲೆಗಳಲ್ಲಿ ‘ಬ್ಲೂವೇಲ್’ ಜಾಗೃತಿಗೆ ತನ್ವೀರ್ ಸೂಚನೆ

Published : Aug 22, 2017, 03:09 PM ISTUpdated : Apr 11, 2018, 12:54 PM IST
ಎಲ್ಲ ಶಾಲೆಗಳಲ್ಲಿ ‘ಬ್ಲೂವೇಲ್’ ಜಾಗೃತಿಗೆ ತನ್ವೀರ್ ಸೂಚನೆ

ಸಾರಾಂಶ

ವಿದ್ಯಾರ್ಥಿಗಳ ಜೀವಕ್ಕೆ ಸಂಚಕಾರ ತರುತ್ತಿರುವ ‘ಬ್ಲೂವೇಲ್ ಚಾಲೆಂಜ್’ ಆನ್’ಲೈನ್ ಗೇಮ್ ಬಗ್ಗೆ ರಾಜ್ಯದ ಎಲ್ಲಾ ಶಾಲಾ ಕಾಲೆಜುಗಳಲ್ಲಿ ಜಾಗೃತಿ ಮೂಡಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ವಿದ್ಯಾರ್ಥಿಗಳ ಜೀವಕ್ಕೆ ಸಂಚಕಾರ ತರುತ್ತಿರುವ ‘ಬ್ಲೂವೇಲ್ ಚಾಲೆಂಜ್’ ಆನ್’ಲೈನ್ ಗೇಮ್ ಬಗ್ಗೆ ರಾಜ್ಯದ ಎಲ್ಲಾ ಶಾಲಾ ಕಾಲೆಜುಗಳಲ್ಲಿ ಜಾಗೃತಿ ಮೂಡಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದಲ್ಲದೆ, ರಾಜ್ಯ ಮತ್ತು ಕೇಂದ್ರ ಐಟಿ ಇಲಾಖೆಗಳಿಗೆ ಪತ್ರ ಬರೆದಿರುವ ಅವರು, ಅನಾರೋಗ್ಯಕರ ಅಂತರ್ಜಾಲ ತಾಣಗಳನ್ನು ನಿರ್ಬಂಧಿಸುವಂತೆ ಕೋರಿದ್ದಾರೆ. ಅಧಿಕಾರಿಗಳಿಗೆ ನೀಡಿರುವ ಸೂಚನೆಯಲ್ಲಿ ಅವರು, ಕೂಡಲೇ ಡಿಡಿಪಿಐಗಳು ಹಾಗೂ ಬಿಇಓಗಳು ಸುತ್ತೋಲೆ ಹೊರಡಿಸಿ ಶಾಲಾ-ಕಾಲೆಜುಗಳಲ್ಲಿ ಕರಪತ್ರ, ಬ್ಯಾನರ್ ಮತ್ತು ಪತ್ರಿಕಾ ಪ್ರಕಟಣೆ ಮೂಲಕ ವ್ಯಾಪಕ ಪ್ರಚಾರ ನೀಡುವ ಜತೆಗೆ ಅರಿವು ಮೂಡಿಸಬೇಕು. ಅನಾರೋಗ್ಯಕರ ವೆಬ್’ಸೈಟ್ ಬಳಸದಂತೆ ಮಕ್ಕಳಿಗೆ ತಿಳಿಸಬೇಕೆಂದು ನಿರ್ದೇಶಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌