ಇಬ್ಬರು ಮಾಜಿ ಶಾಸಕರು, ಓರ್ವ ನಿವೃತ್ತಿ ಪೊಲೀಸ್ ಅಧಿಕಾರಿ ಕಾಂಗ್ರೆಸ್ ಸೇರ್ಪಡೆ

Published : Oct 09, 2018, 10:13 PM ISTUpdated : Oct 09, 2018, 10:16 PM IST
ಇಬ್ಬರು ಮಾಜಿ ಶಾಸಕರು, ಓರ್ವ ನಿವೃತ್ತಿ ಪೊಲೀಸ್ ಅಧಿಕಾರಿ ಕಾಂಗ್ರೆಸ್ ಸೇರ್ಪಡೆ

ಸಾರಾಂಶ

ಇಬ್ಬರು ಮಾಜಿ ಶಾಸಕರು ಹಾಗೂ  ಓರ್ವ ನಿವೃತ್ತಿ ಪೊಲೀಸ್ ಅಧಿಕಾರಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬೆಂಗಳೂರು,[ಅ.09]: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲಿಯೇ ತರಿಕೇರೆಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿ ಮಾಜಿ ಶಾಸಕರಾದ ಜಿ.ಎಚ್.ಶ್ರೀನಿವಾಸ ಮತ್ತು ಟಿ.ಎಚ್.ಶಿವಶಂಕರಪ್ಪ ಅವರು ಕಾಂಗ್ರೆಸ್  ಗೆ ಸೇರ್ಪಡೆಯಾದರು. ಇದೇ ವೇಳೆ ನಿವೃತ್ತಿ ಪೊಲೀಸ್ ಅಧಿಕಾರಿ ಶಿವಪ್ರಸಾದ್ ಅವರಿಗೆ ಪಕ್ಷದ ಭಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಬಳಿಕ ಮಾತನಾಡದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ತರಿಕೇರೆಯ ಇಬ್ಬರು ಮಾಜಿ ಶಾಸಕರು ನಮ್ಮ ಪಕ್ಷದಲ್ಲೇ ಇದ್ರು ಈಗ ವಾಪಸ್ ಆಗ್ತಿರೋದು ನಮಗೆ ಸಂತೋಷವಾಗ್ತಿದೆ, ಮುಂದಿನ ಲೋಕಸಭಾ ಚುನಾವಣೆಗೆ ತರೀಕೆರೆ ವಿಧಾನಕ್ಷೇತ್ರದಲ್ಲಿ ಹೆಚ್ಚು ಬಲಬಂದಂತಾಗಿದೆ ಎಂದರು.

ಜಿ.ಎಚ್.ಶ್ರೀನಿವಾಸ ಅವರು 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದು ಶಾಸಕರಾಗಿದ್ದರು. ನಂತರ ಇತ್ತೀಚೆಗೆ ನಡೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಜಿ.ಎಚ್.ಶ್ರೀನಿವಾಸ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

BREAKING: ದಾವಣಗೆರೆ ಗಡಿ ಭಾಗದಲ್ಲಿ ಭಾರೀ ಸ್ಫೋಟದ ಸದ್ದು; ಭೂಮಿ ಕಂಪಿಸಿದ ಅನುಭವ, ಚಿಕ್ಕಮಲ್ಲನಹೊಳೆ ಗ್ರಾಮಸ್ಥರಲ್ಲಿ ಆತಂಕ
20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!