
ನವದೆಹಲಿ(ಡಿ.18): ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಟ್ಯಾಟೂ ಆರ್ಟಿಸ್ಟ್ ವೋರ್ವನನ್ನು ಆತನ ಸ್ನೇಹಿತರೇ ಶಿರಚ್ಛೇದ ಮಾಡಿ ಕೊಲೆ ಮಾಡಿದ್ದಾರೆ.
ಇಲ್ಲಿನ ಮಯೂರ್ ವಿಹಾರ್ ಪ್ರದೇಶದಲ್ಲಿ 22 ವರ್ಷದ ಬಬ್ಲೂ ಕುಮಾರ್ ಎಂಬ ಟ್ಯಾಟೂ ಆರ್ಟಿಸ್ಟ್ನ ರುಂಡವಿಲ್ಲದ ದೇಹ ಪತ್ತೆಯಾಗಿದ್ದು, ಆತನ ಮೂವರು ಸ್ನೇಹಿತರು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಮಿಶ್ರಾ, ಅಂಕಿತ್ ಶರ್ಮಾ ಮತ್ತು ಇಂದ್ರಜೀತ್ ಎಂಬಾತನನ್ನು ಬಂಧಿಸಲಾಗಿದ್ದು, ತಾವು ಕೊಟ್ಟಿದ್ದ ಹಣವನ್ನು ಹಿಂದಿರುಗಿಸಲು ನಿರಾಕರಿಸಿದ್ದೇ ಬಬ್ಲೂ ಕುಮಾರ್ ಕೊಲೆಗೆ ಕಾರಣ ಎಂದು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಎಳೆನೀರು ಕತ್ತರಿಸುವ ಮಚ್ಚಿನಿಂದ ಬಬ್ಲೂ ಕುಮಾರ್ ಶಿರಚ್ಛೇದ ಮಾಡಲಾಗಿದ್ದು, ಕೊಲೆಯ ಭೀಕರತೆಗೆ ರಾಷ್ಟ್ರ ರಾಜಧಾನಿ ನವದೆಹಲಿ ಬೆಚ್ಚಿ ಬಿದ್ದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.