ಮೋದಿ ಸರ್ಕಾರದ್ದು ತೆರಿಗೆ ಭಯೋತ್ಪಾದನೆ

Published : Nov 08, 2017, 11:05 AM ISTUpdated : Apr 11, 2018, 12:59 PM IST
ಮೋದಿ ಸರ್ಕಾರದ್ದು ತೆರಿಗೆ ಭಯೋತ್ಪಾದನೆ

ಸಾರಾಂಶ

ಅಪನಗದೀಕರಣ ಯೋಜನೆಗೆ ಒಂದು ವರ್ಷ ತುಂಬುತ್ತಿರುವ ಹೊತ್ತಲ್ಲೇ, ಮೋದಿ ಸರ್ಕಾರದ ನೋಟ್‌ಬ್ಯಾನ್ ಮತ್ತು ಜಿಎಸ್‌ಟಿ ನೀತಿಗಳು ತೆರಿಗೆ ಭಯೋತ್ಪಾದನೆಯಂತಿವೆ ಎಂದು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಕಟುವಾಗಿ ಟೀಕಿಸಿದ್ದಾರೆ.

ಅಹಮದಾಬಾದ್: ಅಪನಗದೀಕರಣ ಯೋಜನೆಗೆ ಒಂದು ವರ್ಷ ತುಂಬುತ್ತಿರುವ ಹೊತ್ತಲ್ಲೇ, ಮೋದಿ ಸರ್ಕಾರದ ನೋಟ್‌ಬ್ಯಾನ್ ಮತ್ತು ಜಿಎಸ್‌ಟಿ ನೀತಿಗಳು ತೆರಿಗೆ ಭಯೋತ್ಪಾದನೆಯಂತಿವೆ ಎಂದು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಕಟುವಾಗಿ ಟೀಕಿಸಿದ್ದಾರೆ.

ಅಲ್ಲದೇ ಅಪನಗದೀಕರಣ ಪ್ರಕ್ರಿಯೆ ಅಜಾಗರೂಕ ಕ್ರಮ. ಅಧಿಕ ಮೌಲ್ಯದ ನೋಟುಗಳನ್ನು ರದ್ದು ಮಾಡಿದ್ದು ಸಂಘಟಿತ ಮತ್ತು ಕಾನೂನು ಬಾಹಿರ ಲೂಟಿ ಎಂದು ಆರೋಪಿಸಿದ್ದಾರೆ. ಈ ನಡುವೆ ಸಿಂಗ್ ಟೀಕೆಗೆ ತಿರುಗೇಟು ನೀಡಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಅಪನಗದೀಕರಣ ನೈತಿಕ ಮತ್ತು ನೀತಿಯುತ ಕ್ರಮವಾಗಿದೆ.

ಯುಪಿಎ ಅವಧಿಯಲ್ಲಿ ೨ಜಿ, ಕಾಮನ್‌ವೆಲ್ತ್ ಗೇಮ್ ಮತ್ತು ಕಲ್ಲಿದ್ದಲು ಹಗರಣದಲ್ಲಿ ದೇಶವನ್ನು ಲೂಟಿಗೈಯಲಾಗಿದೆ ಎಂದು ಜೇಟ್ಲಿ ತಿರುಗೇಟು ನೀಡಿದ್ದಾರೆ.

ಸಿಂಗ್ ಟೀಕೆ: ಗುಜರಾತ್ ಚುನಾವಣಾ ಪ್ರಚಾರದ ಭಾಗವಾಗಿ ವ್ಯಾಪಾರಸ್ಥರು ಮತ್ತು ಉದ್ಯಮಿಗಳ ಜತೆಗಿನ ಸಂವಾದದಲ್ಲಿ ಮಂಗಳವಾರ ಮಾತನಾಡಿದ ಮನಮೋಹನ್ ಸಿಂಗ್, ಅಪನಗದೀಕರಣ ಪ್ರಕ್ರಿಯೆ ಅಜಾಗರೂಕ ಕ್ರಮ ಎಂದು ಟೀಕಿಸಿದರು.

ಇದೇ ವೇಳೆ ಜಿಎಸ್‌ಟಿ ವಿರುದ್ಧವೂ ಸಿಂಗ್ ಹರಿಹಾಯ್ದರು. ಲೂಟಿ ಮಾಡಿದ್ದು ಕಾಂಗ್ರೆಸ್: ಇದೇ ವೇಳೆ ಕೇಂದ್ರದ ಅಪನಗದೀಕರಣ ಕ್ರಮವನ್ನು ಸಮರ್ಥಿಸಿಕೊಂಡ ಹಣ ಕಾಸು ಸಚಿವ ಅರುಣ್ ಜೇಟ್ಲಿ, ಯುಪಿಎ ಸರ್ಕಾರ 2ಜಿ, ಕಾಮನ್‌ವೆಲ್ತ್, ಕಲ್ಲಿದ್ದಲು ಗಣಿ ಹಂಚಿಕೆ ಹಗರಣದಲ್ಲಿ ದೇಶವನ್ನು ಲೂಟಿ ಹೊಡೆದಿದೆ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೂಪಾಯಿ ಕುಸಿದರೂ ಪ್ರಗತಿಯತ್ತ ಭಾರತ: ನಿಜಕ್ಕೂ ಏನಾಗುತ್ತಿದೆ?‌
87 ವರ್ಷದ ಪ್ರಸಿದ್ಧ ಪೇಂಟರ್ ಮಗುವಿಗೆ ತಾಯಿಯಾದ 37 ವರ್ಷದ ಪತ್ನಿ, ಉಳಿದ ಮಕ್ಕಳೊಂದಿಗೆ ಬಂಧವೇ ಕಟ್