ಬಿಜೆಪಿ ವಿರುದ್ಧ  ಟಿಡಿಪಿ ‘ಸಮರ’?

Published : Feb 02, 2018, 04:28 PM ISTUpdated : Apr 11, 2018, 12:37 PM IST
ಬಿಜೆಪಿ ವಿರುದ್ಧ  ಟಿಡಿಪಿ ‘ಸಮರ’?

ಸಾರಾಂಶ

ಕಾದು ನೋಡುವುದು, ಪಕ್ಷದ ಸಂಸದರು ರಾಜಿನಾಮೆ ನೀಡುವುದು ಅಥವಾ ಮೈತ್ರಿಕೂಟದಿಂದ ಹೊರಬರುವುದು. ಭಾನುವಾರ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ತೀರ್ಮಾನ 

ನವದೆಹಲಿ: ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್ ಮಂಡಿಸಿದ ಬೆನ್ನಲ್ಲೇ ಎನ್’ಡಿಎನ ಪ್ರಮುಖ ಮಿತ್ರಪಕ್ಷವಾಗಿರುವ ತೆಲುಗು ದೇಶಂ ಪಕ್ಷ (ಟಿಡಿಪಿ)ಯು  ಬಿಜೆಪಿ ವಿರುದ್ಧ ‘ಸಮರ’ ಸಾರುವುದಾಗಿ ಹೇಳಿದೆ.

ನಿನ್ನೆ ಮಂಡಿಸಲಾದ ಕೇಂದ್ರ ಬಜೆಟ್’ನಿಂದ ಬಹಳ ನಿರಾಶೆಯಾಗಿದ್ದು, ಆಂಧ್ರ ಪ್ರದೇಶದ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆಯೆಂದು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ನಾವು ಬಿಜೆಪಿ ವಿರುದ್ಧ ಸಮರ ಸಾರುತ್ತೇವೆ. ನಮ್ಮ ಮುಂದೆ ಕೇವಲ ಮೂರು ಆಯ್ಕೆಗಳಿವೆ. ಕಾದು ನೋಡುವುದು, ಪಕ್ಷದ ಸಂಸದರು ರಾಜಿನಾಮೆ ನೀಡುವುದು ಅಥವಾ ಮೈತ್ರಿಕೂಟದಿಂದ ಹೊರಬರುವುದು. ಭಾನುವಾರ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು, ಎಂದು ಟಿಡಿಪಿ ಸಂಸದ ಟಿ,ಡಿ. ವೆಂಕಟೇಶ್ ಹೇಳಿದ್ದಾರೆ.

ಈ ಮುಂಚೆಯು ಸ್ಥಳೀಯ ಬಿಜೆಪಿ ನಾಯಕರ ವರ್ತನೆ ಬಗ್ಗೆ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದರು.

ನಾವು ಮೈತ್ರಿಧರ್ಮವನ್ನು ಪಾಲಿಸುತ್ತಿದ್ದೇವೆ, ಆದರೆ ಬಿಜೆಪಿ ನಾಯಕರು ಮಿತಿಯನ್ನು ಮೀರುತ್ತಿದ್ದಾರೆ. ಎಂದು ನಾಯ್ಡು ಆಕ್ರೋಶ ವ್ಯಕ್ತಪಡಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನ್ಯ ಧರ್ಮಿಯ ಜೊತೆ ಮದುವೆ: ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ: ಸಿಎಂ ಸಿದ್ದರಾಮಯ್ಯ ಸಲಹೆ