‘ಪಾಕಿಸ್ತಾನಕ್ಕೆ ಬುದ್ಧಿ ಹೇಳಿ, ಮಾತು ಕೇಳದಿದ್ದರೆ ಸರ್ವನಾಶ ಮಾಡಿಬಿಡಿ’

Published : Oct 29, 2016, 02:07 PM ISTUpdated : Apr 11, 2018, 01:01 PM IST
‘ಪಾಕಿಸ್ತಾನಕ್ಕೆ ಬುದ್ಧಿ ಹೇಳಿ, ಮಾತು ಕೇಳದಿದ್ದರೆ ಸರ್ವನಾಶ ಮಾಡಿಬಿಡಿ’

ಸಾರಾಂಶ

ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹುತಾತ್ಮ ಯೋಧ ಮನ್ ದೀಪ್ ಸಿಂಗ್ ಪತ್ನಿ ಶನಿವಾರ ಮನವಿ ಮಾಡಿಕೊಂಡಿದ್ದು, ಪಾಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಂಡಿಗಢ (ಅ.29): ಅಂತಾರಾಷ್ಟ್ರೀಯ ಗಡಿ ಮತ್ತು ಗಡಿ ನಿಯಂತ್ರಣ ರೇಖೆಯಲ್ಲಿ ಈಗಾಗಲೇ ನಮ್ಮ 7ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಆ ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹುತಾತ್ಮ ಯೋಧ ಮನ್ ದೀಪ್ ಸಿಂಗ್ ಪತ್ನಿ ಶನಿವಾರ ಮನವಿ ಮಾಡಿಕೊಂಡಿದ್ದು, ಪಾಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಎಸ್ ಎಫ್ ಯೋಧ ಮನ್ ದೀಪ್ ಸಿಂಗ್ ಅವರನ್ನು ಪಾಕ್ ಸೈನಿಕರು ನಿನ್ನೆ ಹತ್ಯೆಗೈದಿದ್ದರು. ಇಂದು ಹುತಾತ್ಮ ಮನ್ ದೀಪ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಹುಟ್ಟೂರಾದ ಹರ್ಯಾಣದ ಕುರುಕ್ಷೇತ್ರಕ್ಕೆ ಕೊಂಡೊಯ್ಯುತ್ತಿದ್ದ ಸಂದರ್ಭದಲ್ಲಿ ಪತ್ನಿ ಎಎನ್ಐ ಜೊತೆ ಮಾತನಾಡುತ್ತ, ಸರ್ಕಾರಕ್ಕೆ ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ, ಪಾಕಿಸ್ತಾನಕ್ಕೆ ಬುದ್ಧಿ ಹೇಳಿ, ಒಂದು ವೇಳೆ ಅದು ಮಾತು ಕೇಳದಿದ್ದರೆ ಪಾಕಿಸ್ತಾನವನ್ನು ಸರ್ವನಾಶ ಮಾಡಿಬಿಡಿ. ಕನಿಷ್ಠ ಪಕ್ಷ ಪ್ರತಿದಿನ ಕಪ್ಪು ದೀಪಾವಳಿ ಆಗುವುದು ಬೇಡ ಎಂದು ಸಿಂಗ್ ಪತ್ನಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಾವಳಿ ಉಳಿಸಿ: ಜನವರಿ 7 ರಿಂದ ಯುವ ಕಾಂಗ್ರೆಸ್‌ನಿಂದ 1,000 ಕಿ.ಮೀ ಬೃಹತ್ ಪಾದಾಯಾತ್ರೆ!
ಹೊಸ ವರ್ಷ ಸಂಭ್ರಮದಲ್ಲಿ ಕಾರು ಖರೀದಿಸುವವರಿಗೆ ಶಾಕ್, ಜನವರಿಯಿಂದ ರೆನಾಲ್ಟ್ ಬೆಲೆ ಏರಿಕೆ