
ಹುಬ್ಬಳ್ಳಿ (ನ.14): ನವನಗರದ ಶಿವಾನಂದ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕರೊಬ್ಬರು ರೂ.1000 ಮುಖಬೆಲೆಯ ನೋಟುಗಳನ್ನು ಬದಲಿಸಲು ವಿದ್ಯಾರ್ಥಿಗಳನ್ನು ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಹಿಡಿದು ನೋಟು ಬದಲಿಸಲು ನವನಗರದ ಯೂನಿಯನ್ ಬ್ಯಾಂಕ್ ಮುಂದೆ ಕ್ಯೂನಲ್ಲಿ ನಿಂತಿದ್ದಾಗ ಸ್ಥಳೀಯರು ವಿಚಾರಿಸಿದ್ದಾರೆ. ಶಿಕ್ಷಕ ತಮ್ಮಲ್ಲಿದ್ದ ರೂ.1000 ನೋಟುಗಳನ್ನು ಬದಲಿಸುವಂತೆ ನೀಡಿದ್ದಾರೆಂದು ತಿಳಿಸಿದ್ದಾರೆ. ಸ್ಥಳದ್ದಲ್ಲಿದ್ದವರು ಇದನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ವಾಟ್ಸ್ಯಾಪ್ನಲ್ಲಿ ಹರಿದಾಡುತ್ತಿವೆ.
ರೂ.2 ಸಾವಿರ ನೋಟು ಅಪಹರಿಸಿ ಪರಾರಿ: ಕೊಡಗು ಜಿಲ್ಲೆ ಶನಿವಾರಸಂತೆ ಸಮೀಪದ ದೊಡ್ಡಳ್ಳಿ ನಿವಾಸಿ ಯೋಗೇಶ್ ಎಂಬುವವರಿಂದ ರೂ.2 ಸಾವಿರದ ನೋಟನ್ನು ನೋಡಿಕೊಡುವುದಾಗಿ ಪಡೆದ ಕಿಡಿಗೇಡಿಯೊಬ್ಬ ನೋಟು ಪಡೆದು ಪರಾರಿಯಾದ ಘಟನೆ ಗುಡುಗಳಲೆ ಜಂಕ್ಷನ್ನಲ್ಲಿರುವ ಕೆನರಾ ಬ್ಯಾಂಕ್ ಮುಂದೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.