
ಕೊಪ್ಪಳ(ಮಾ.27): ನಗರಸಭೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಆಕೆಯ ಸಾವಿಗೆ ಕಾರಣವಾಗಿದ್ದ ಶಿಕ್ಷಕಿಯನ್ನು ಕೊಪ್ಪಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಅನ್ನಪೂರ್ಣ ಅಸ್ಕಿ ಬಂಧನಕ್ಕೊಳಗಾಗಿರುವ ಶಿಕ್ಷಕಿ. ಅನ್ನಪೂರ್ಣ ಅಸ್ಕಿ ಮಾರ್ಚ್ 16 ರಂದು ನಗರಸಭೆ ಸಿಬ್ಬಂದಿ ಕೋಟ್ರಮ್ಮಳ ಮೇಲೆ ಹಲ್ಲೆ ಮಾಡಿದ್ದಳು. ಇದರಿಂದಾಗಿ ಕೋಟ್ರಮ್ಮ ಮಾನಸಿಕ ಅಘಾತಕ್ಕೆ ಒಳಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಬಳಿಕ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಬೆಳಿಗ್ಗೆ ಮೃತಪಟ್ಟಿದ್ದಳು. ಈ ಕುರಿತಂತೆ ಅನ್ನಪೂರ್ಣ ಅಸ್ಕಿ ವಿರುದ್ಧ ಮಾರ್ಚ 16ರಂದೇ ಕೊಪ್ಪಳ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇಂದು ಕೋಟ್ರಮ್ಮ ಮೃತಪಟ್ಟಿರುವ ಹಿನ್ನಲೆಯಲ್ಲಿ ಆಕೆಯ ಸಾವಿಗೆ ಕಾರಣವಾದ ದೈಹಿಕ ಶಿಕ್ಷಕಿ ಅನ್ನಪೂರ್ಣ ಅಸ್ಕಿಯನ್ನು ಬಂಧಿಸುವಂತೆ ಕೋಟ್ರಮ್ಮ ಕುಟುಂಬಸ್ಥರು ಹಾಗೂ ನಗರಸಭೆ ಸಿಬ್ಬಂದಿ ಒತ್ತಾಯಿಸಿದ್ದರು. ಈ ಹಿನ್ನಲೆ ನಿನ್ನೆ ರಾತ್ರಿ ಕೊಪ್ಪಳ ನಗರ ಠಾಣೆಯ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.