
ಚಿಕ್ಕಮಗಳೂರು (ಫೆ.10): ಗಂಟಲಿನಲ್ಲಿ ತೆಂಗಿನ ಕಾಯಿ ಸಿಲುಕಿ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ನಗರದ ಸಂಜೀವಿನಿ ಶಾಲೆಯಲ್ಲಿ ಘಟನೆ ನಡೆದಿದೆ. ಈ ಶಾಲೆಯ ಶಿಕ್ಷಕಿ ನವ್ಯಶ್ರೀ ಮೃತಪಟ್ಟವರು. ಶಾಲೆ ಪಕ್ಕದಲ್ಲಿರೋ ಸಾಲಮರದಮ್ಮ ದೇವಾಲಯದಲ್ಲಿ ಪೂಜೆ ಮುಗಿಸಿ ತೆಂಗಿನ ಕಾಯಿ ತಿನ್ನುವಾಗ ಗಂಟಲಿನಲ್ಲಿ ಕಾಯಿ ಚೂರು ಸಿಕ್ಕಿ ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ. ನಗರದ ಹೊಲಿಕ್ರಾಸ್ ಆಸ್ಪತ್ರೆಯಲ್ಲಿ ಮೃತದೇಹ ಇಡಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.