
ಮಾಗಡಿ: ಶಾಲೆಯಲ್ಲಿ ಮಕ್ಕಳ ಎದುರೇ ಶಿಕ್ಷಕಿ ಪತ್ನಿ ಮೇಲೆ ಪೆಟ್ರೋಲ್ ಸುರಿದು ಕೊಲೆ ಮಾಡಲು ಪತಿಯೊಬ್ಬ ಯತ್ನಿಸಿದ ಘಟನೆ ಮಾಗಡಿಯಲಲ್ಲಿ ನಡೆದಿದೆ.
ಮಾಗಡಿ ತಾಲೂಕಿನ ಶಂಭಯ್ಯನಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು ಸುನಂದಾ (50) ತಮ್ಮ ಪತಿ ದುಷ್ಕೃತ್ಯದಿಂದ ಶೇ.50 ರಷ್ಟು ಸುಟ್ಟ ಗಾಯಗಳೊಂದಿಗೆ ನರಳುತ್ತಿದ್ದಾರೆ.
ಗ್ರಾಮದ ಶಾಲೆಯಲ್ಲಿದ್ದ ವೇಳೆ ಏಕಾ ಏಕಿ ಶಾಲೆಗೆ ನುಗ್ಗಿದ ಪತಿ ರೇಣುಕಾರಾಧ್ಯ ತರಗತಿಯಲ್ಲಿದ್ದ ಮಕ್ಕಳ ಎದುರೇ, ಸುನಂದಾ ಅವರೊಂದಿಗೆ ಜಗಳಕ್ಕಿಳಿದಿದ್ದಾನೆ. ನೋಡು ನೋಡುತ್ತಿದ್ದಂತೆ ಸುನಂದಾ ಮೇಲೆ ಬಾಟಲಿಯಲ್ಲಿ ತಂದಿದ್ದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ಮಕ್ಕಳ ಗಲಾಟೆ ಕೇಳಿ ತಕ್ಷಣ ಸ್ಥಳಕ್ಕೆ ಧಾವಿಸಿದ ಇತರ ಶಿಕ್ಷಕರು ಹಾಗೂ ಗ್ರಾಮಸ್ಥರು ಬೆಂಕಿ ನಂದಿಸಿ ಮಾಗಡಿ ತಾಲೂಕು ಆಸ್ಪತ್ರೆಗೆ ಸುನಂದಾ ಅವರನ್ನು ದಾಖಲಿಸಿದ್ದಾರೆ.
ರೇಣುಕಾರಾಧ್ಯ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ರೋಪಿಗಾಗಿ ಬಲೆ ಬೀಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.