
ಶಿಕ್ಷಕರಿಗೆ ಪಠ್ಯಕ್ಕಿಂತ ಪಠ್ಯೇತರ ಚಟುವಟಿಕೆಗಳಲ್ಲೇ ಹೆಚ್ಚಾಗಿ ತೊಡಗಿಸಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಬಯಲು ಶೌಚ ಮುಕ್ತ ದೇಶ ನಿರ್ಮಾಣಕ್ಕಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವನ್ನು ಬಿಹಾರ ಸರ್ಕಾರ, ಶಿಕ್ಷಕರಿಗೆ ವಹಿಸಿದೆ.
ಇದರನ್ವಯ ಶಿಕ್ಷಕರು ಪ್ರತಿ ಪಂಚಾಯ್ತಿ ಮತ್ತು ವಾರ್ಡ್’ಗಳಿಗೆ ಭೇಟಿ ನೀಡಿ ಅರಿವು ಮೂಡಿಸಬೇಕು. ತಮ್ಮ ಮಾತನ್ನು ಪುರಸ್ಕರಿಸದ ವ್ಯಕ್ತಿಗಳ ಫೋಟೊ ತೆಗೆದು ಕಳುಹಿಸಬೇಕು ಎಂದು ಸೂಚಿಸಿದೆ. ಇದು ವಿವಾದಕ್ಕೆ ಕಾರಣವಾಗಿದೆ.
ಆದರೆ ಸರ್ಕಾರ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ. ಬೆಳಗ್ಗೆ ಮತ್ತು ಸಂಜೆ ಕೆಲಹೊತ್ತು ಮಾತ್ರ ಸಮಯ ಮೀಸಲಿಟ್ಟರೆ ಅಂಥ ಸಮಸ್ಯೆಯಾಗದು ಎಂದು ಹೇಳಿಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.