ವರ್ಗಾವಣೆಗಾಗಿ ಸಚಿವರ ಮುಂದೆ ಶಿಕ್ಷಕರ ಹೈಡ್ರಾಮ

Published : Sep 04, 2019, 07:36 AM IST
ವರ್ಗಾವಣೆಗಾಗಿ ಸಚಿವರ ಮುಂದೆ ಶಿಕ್ಷಕರ ಹೈಡ್ರಾಮ

ಸಾರಾಂಶ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ ಹಾಗೂ ಕಡ್ಡಾಯ ವರ್ಗಾವಣೆ ಸ್ಥಗಿತಗೊಳಿಸುವಂತೆ ಶಿಕ್ಷಕರು ಪ್ರತಿಭಟನೆ ನಡೆಸಿದರು. 

ಬೆಂಗಳೂರು [ಸೆ.04]:   ಶಿಕ್ಷಕರ ವರ್ಗಾವಣೆಯನ್ನು ಆರಂಭಿಸುವಂತೆ ಮತ್ತು ಕಡ್ಡಾಯ ವರ್ಗಾವಣೆ ಸ್ಥಗಿತಗೊಳಿಸುವಂತೆ ಕೋರಿ ಶಿಕ್ಷಕರು ಮಂಗಳವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು.

ಬಸವೇಶ್ವರ ನಗರದಲ್ಲಿರುವ ಸಚಿವರ ನಿವಾಸ ಹಾಗೂ ಸರ್ವ ಶಿಕ್ಷಣ ಅಭಿಯಾನ ಕಚೇರಿ ಎರಡೂ ಕಡೆ ಭೇಟಿ ನೀಡಿದ್ದ ಶಿಕ್ಷಕರು, ಸಚಿವರಿಗೆ ಮನವಿ ಸಲ್ಲಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. 

ಇದಾದ ಬಳಿಕ ಸಂಜೆ ಸರ್ವಶಿಕ್ಷಣ ಅಭಿಯಾನ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಸಚಿವರು ಈ ಬಾರಿ ಕಡ್ಡಾಯ ವರ್ಗಾವಣೆ ಮಾಡುವುದಾಗಿ ತಿಳಿಸಿದರು. 

ಸಚಿವರ ಹೇಳಿಕೆ ಬೆನ್ನಲ್ಲೇ ಕೆಲವು ಶಿಕ್ಷಕರು ಹೈಡ್ರಾಮಾ ಮಾಡಿದರು. ನಾವು ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದೇವೆ. ಮತ್ತೆ ಕಡ್ಡಾಯ ವರ್ಗಾವಣೆ ಅಡಿ ಗ್ರಾಮೀಣ ಪ್ರದೇಶಗಳಿಗೆ ಕಳುಹಿಸುತ್ತಿರುವುದು ಸರಿಯಲ್ಲ. ಕೂಡಲೇ ಕಡ್ಡಾಯ ವರ್ಗಾವಣೆ ಕೈಬಿಡಬೇಕು ಎಂದು ತಮ್ಮ ಅಳಲು ತೋಡಿಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ನಾವು ದೇಶಕ್ಕಾಗಿ, ನೀವು ಚುನಾವಣೆಗಾಗಿ: ಬಿಜೆಪಿ. ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ವಾಗ್ದಾಳಿ
ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ