ಶಿಕ್ಷಕರ ವರ್ಗಾವಣೆ ನೀತಿ ಪ್ರಕಟ; ನೂತನ ನೀತಿಯಲ್ಲಿ ವರ್ಗಾವಣೆ ಪ್ರಮಾಣ ಶೇ.15ಕ್ಕೆ ಏರಿಕೆ

Published : Sep 07, 2017, 07:56 PM ISTUpdated : Apr 11, 2018, 12:49 PM IST
ಶಿಕ್ಷಕರ ವರ್ಗಾವಣೆ ನೀತಿ ಪ್ರಕಟ; ನೂತನ ನೀತಿಯಲ್ಲಿ ವರ್ಗಾವಣೆ ಪ್ರಮಾಣ ಶೇ.15ಕ್ಕೆ ಏರಿಕೆ

ಸಾರಾಂಶ

ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಶಾಸಕರ ಪ್ರತಿಭಟನೆಗೆ ಮಣಿದ ರಾಜ್ಯ ಶಿಕ್ಷಣ ಇಲಾಖೆ ಕಡೆಗೂ ವರ್ಗಾವಣೆ ನೀತಿ ಪ್ರಕಟಿಸಿದೆ. ನೂತನ ವರ್ಗಾವಣೆ ನೀತಿಯಲ್ಲಿ ವರ್ಗಾವಣೆ ಪ್ರಮಾಣವನ್ನು ಶೇಕಡಾ 15ಕ್ಕೆ ಏರಿಕೆ ಮಾಡಲಾಗಿದೆ. 

ಬೆಂಗಳೂರು (ಸೆ.07): ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಶಾಸಕರ ಪ್ರತಿಭಟನೆಗೆ ಮಣಿದ ರಾಜ್ಯ ಶಿಕ್ಷಣ ಇಲಾಖೆ ಕಡೆಗೂ ವರ್ಗಾವಣೆ ನೀತಿ ಪ್ರಕಟಿಸಿದೆ. ನೂತನ ವರ್ಗಾವಣೆ ನೀತಿಯಲ್ಲಿ ವರ್ಗಾವಣೆ ಪ್ರಮಾಣವನ್ನು ಶೇಕಡಾ 15ಕ್ಕೆ ಏರಿಕೆ ಮಾಡಲಾಗಿದೆ. 

ಪ್ರಮುಖವಾಗಿ 10 ವರ್ಷಗಳಿಂದ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆ ನಿಗದಿ ಮಾಡಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ 10 ವರ್ಷಗಳಿಂದ ಬೀಡು ಬಿಟ್ಟಿದ್ದವರಿಗೆ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ವರ್ಗಾವಣೆ ಮಾಡಲು, ಹಾಗೂ ನಗರಸಭೆ,ಪುರಸಭೆ ವ್ಯಾಪ್ತಿಯಲ್ಲಿ 10 ವರ್ಷಗಳಿಂದ ಒಂದೇ ಸ್ಥಳದಲ್ಲಿ ನೆಲೆಯೂರಿದ್ದವರಿಗೆ ಗ್ರಾಮಾಂತರ ಪ್ರದೇಶಕ್ಕೆ ವರ್ಗಾವಣೆ ಮಾಡಲು ಹಾಗೂ ಗ್ರಾಮಾಂತರದಲ್ಲಿ 10 ವರ್ಷಗಳಿಂದ ಬೀಡು ಬಿಟ್ಟಿದ್ದವರಿಗೆ ನಗರಕ್ಕೆ ವರ್ಗಾವಣೆ ಮಾಡುವ ನಿಯಮ ಮಾಡಲಾಗಿದೆ. ಗಂಡ-ಹೆಂಡತಿ, ಆನಾರೋಗ್ಯಪೀಡಿತರು, ವಿಧವೆಯರು, ಅಂಗವಿಕಲರು ಹಾಗೂ ಮಾಜಿ ಸೈನಿಕರಿಗೆ ಆದ್ಯತೆಯ ಮೇಲೆ ವರ್ಗಾವಣೆ ಮಾಡಲು ತೀರ್ಮಾನಿಸಲಾಗಿದೆ. ಇನ್ನು ತಾಲೂಕು ವ್ಯಾಪ್ತಿಯೊಳಗಷ್ಟೇ ಇದ್ದ ವರ್ಗಾವಣೆ ಇನ್ನು ಮುಂದೆ ಜಿಲ್ಲಾವ್ಯಾಪ್ತಿಗೆ ವಿಸ್ತರಣೆ ಮಾಡಲಾಗಿದ್ದು, ಜಿಲ್ಲಾವ್ಯಾಪ್ತಿಯೊಳಗೇ ನಡೆಯುತ್ತಿದ್ದ ವರ್ಗಾವಣೆ ಇನ್ನು ವಲಯ ವ್ಯಾಪ್ತಿಗೆ ವಿಸ್ತರಣೆ ಮಾಡಲಾಗಿದೆ. ಹಾಗೆಯೇ ವಲಯ ವ್ಯಾಪ್ತಿಯೊಳಗಿನ ವರ್ಗಾವಣೆ ಇನ್ನು ಮುಂದೆ ರಾಜ್ಯ ವ್ಯಾಪ್ತಿಗೆ ವಿಸ್ತರಣೆ ಮಾಡಿ ವರ್ಗಾವಣೆ ನೀತಿ ಪ್ರಕಟಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌