
ಬೆಂಗಳೂರು (ಏ. 07): ವಿದ್ಯಾಪೀಠದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆಯವರ ಭಾಷಣಕ್ಕೆ ಅಡ್ಡಿಪಡಿಸಲಾಯಿತು ಎನ್ನುವ ಘಟನೆಗೆ ಸಂಬಂಧಿಸಿದಂತೆ ಟೀಂ ಮೋದಿ ಸ್ಪಷ್ಟನೆ ನೀಡಿದೆ.
‘ನಿನ್ನೆ ವಿದ್ಯಾಪೀಠದಲ್ಲಿ ವಿಷ್ಣು ಸಹಸ್ರನಾಮ ಯಜ್ಞ ಕಾರ್ಯಕ್ರಮವಿತ್ತು. ಐದಾರು ತಿಂಗಳ ಮುನ್ನವೇ ’ರಾಷ್ಟ್ರಧರ್ಮ’ ಎನ್ನುವ ವಿಷಯದ ಕುರಿತು ಮಾತನಾಡಬೇಕೆಂದು ಚಕ್ರವರ್ತಿ ಸೂಲಿಬೆಲೆಯವರಿಗೆ ಹೇಳಲಾಗಿತ್ತು. ಅದೇ ರೀತಿ ಭಾಷಣ ಮಾಡಲು ಹೋದಾಗ ಕಾಂಗ್ರೆಸ್ಸಿನವರೊಂದಷ್ಟು ಮಂದಿ ಈ ಕಾರ್ಯಕ್ರಮಕ್ಕೆ ಬಂದು ಅಡ್ಡಿಪಡಿಸಿದರು. ಚಕ್ರವರ್ತಿ ಸೂಲಿಬೆಲೆಯವರು ಭಾರತ್ ಮಾತಾ ಕಿ ಜೈ ಎಂದರೆ ಅವರು ರಾಹುಲ್ ಗೆ ಜೈಕಾರ ಕೂಗಿದರು.
’ಕೈ’ ಕಾರ್ಯಕರ್ತರಿಂದ ಭಾಷಣಕ್ಕೆ ಅಡ್ಡಿ; ಹಿಂತಿರುಗಿದ ಚಕ್ರವರ್ತಿ ಸೂಲಿಬೆಲೆ
ಇಷ್ಟಾದರೂ ಚಕ್ರವರ್ತಿಯವರು ಕಾರ್ಯಕ್ರಮದಲ್ಲಿ ’ಭಾರತ ವೈಭವ’ ದ ಕಥನವನ್ನು ಸಂಪೂರ್ಣ ಜನರ ಮುಂದಿಟ್ಟರು. ಕಾಂಗ್ರೆಸ್ಸಿನವರು ವಿರೋಧ ವ್ಯಕ್ತಪಡಿಸುತ್ತಿದ್ದರೆ ಒಂದಷ್ಟು ದೇಶಭಕ್ತರು ವಂದೇ ಮಾತರಂ, ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿ ಕಾಂಗ್ರೆಸ್ಸಿಗರ ಬಾಯ್ಮುಚ್ಚಿಸಿದರು’ ಎಂದು ಟೀಂ ಮೋದಿ ಘಟನೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.