ಅಮೆರಿಕದಲ್ಲಿದ್ದ ಸಾಫ್ಟ್’ವೇರ್ ಎಂಜಿನಿಯರ್ ಬೆಂಗಳೂರಿನಲ್ಲಿ ಆತ್ಮಹತ್ಯೆ

Published : Jan 07, 2018, 08:24 AM ISTUpdated : Apr 11, 2018, 12:47 PM IST
ಅಮೆರಿಕದಲ್ಲಿದ್ದ ಸಾಫ್ಟ್’ವೇರ್ ಎಂಜಿನಿಯರ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸಾರಾಂಶ

ಅಮೆರಿಕದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ವ್ಯಕ್ತಿಯೊಬ್ಬರು ನಗರದ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು (ಜ.07): ಅಮೆರಿಕದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ವ್ಯಕ್ತಿಯೊಬ್ಬರು ನಗರದ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಲ್ಯಾಣ ನಗರ ನಿವಾಸಿ ಜೇಕಬ್ ವೆಯೋ (27) ಮೃತರು. ಜ.3ರಂದು ತಡರಾತ್ರಿ ಘಟನೆ ನಡೆದಿದೆ. ಜೇಕಬ್ ಕುಟುಂಬ ಕಲ್ಯಾಣ ನಗರದಲ್ಲಿ ವಾಸವಿದೆ.

ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಜೇಕಬ್ ವಿವಾಹಿತರಾಗಿದ್ದು, ಅಮೆರಿಕದಲ್ಲಿ ಉದ್ಯೋಗದಲ್ಲಿದ್ದರು. ಕ್ರಿಸ್ಮಸ್ ಆಚರಣೆ ಹಿನ್ನೆಲೆಯಲ್ಲಿ ಕುಟುಂಬ ಜತೆ ಹಬ್ಬ ಆಚರಿಸಲು ಜೇಕಬ್ ರಜೆ ಪಡೆದು ಡಿಸೆಂಬರ್ ತಿಂಗಳಲಿನಲ್ಲಿ ನಗರಕ್ಕೆ ಬಂದಿದ್ದರು. ಕುಟುಂಬ ಸಮೇತ ಕ್ರಿಸ್ಮಸ್ ಆಚರಿಸಿದ್ದ ಜೇಕಬ್ ಡಿ.3ರಂದು ಅಮೆರಿಕಕ್ಕೆ ವಾಪಸ್ ತೆರಳಬೇಕಿತ್ತು.

ಜೇಕಬ್ ತಾಯಿ ಮತ್ತು ಕುಟುಂಬಸ್ಥರು ಡಿ.3ರಂದು ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಹೋಗಿ ಜೇಕಬ್’ನನ್ನು ಬಿಟ್ಟು ಬಂದಿದ್ದರು. ಪೋಷಕರು ಮನೆಗೆ ತೆರಳುತ್ತಿದ್ದಂತೆ ವಿಮಾನ ನಿಲ್ದಾಣದಿಂದ ಹೊರ ಬಂದಿರುವ ಜೇಕಬ್ ಚಿಕ್ಕಜಾಲಕ್ಕೆ ಬಂದು ತಡರಾತ್ರಿ ‘ಹೌಸ್ ಪಿಂಚ್’ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದರು. ಮರು ದಿನ ಜೇಕಬ್ ಲಾಡ್ಜ್‌ನ ಕೊಠಡಿಯಿಂದ ಹೊರ ಬಂದಿಲ್ಲ. ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ಅವರ ಮೊಬೈಲ್‌ಗೆ ಕರೆ ಮಾಡಿದ್ದು, ಸ್ವಿಚ್ ಆಫ್ ಎಂದು ಬಂದಿದೆ. ಬಳಿಕ ಲಾಡ್ಜ್‌ನ ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ