
ಮುಂಬೈ (ಡಿ.25): ಮಹಿಳಾ ಟೆಕ್ಕಿಯೊಬ್ಬಳನ್ನು ಅಟ್ಟಾಡಿಸಿ ನಡುರಸ್ತೆಯಲ್ಲೇ ಕೊಲೆ ಮಾಡಿರುವ ಭೀಕರ ಘಟನೆ ಪುಣೆಯಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಕೊಲೆಯಾದ ಟೆಕ್ಕಿಯನ್ನು ಕೋಲ್ಕತಾ ಮೂಲದ ಅಂತ್ರಾ ದಾಸ್(23) ಎಂದು ಗುರುತಿಸಲಾಗಿದೆ.
ಅಂತ್ರಾ ದಾಸ್ ಕೆಲಸ ಮಾಡುತ್ತಿದ್ದ ಕ್ಯಾಪ್'ಜೆಮಿನಿ ಕಂಪನಿಯ ಸುಮಾರು ಅರ್ಧ ಕಿ.ಮೀ. ದೂರದಲ್ಲೇ ಈ ಘಟನೆ ನಡೆದಿದ್ದು, ಹಂತಕನು ಮೊದಲು ಆಕೆಯೊಂದಿಗೆ ವಾಗ್ವಾದ ನಡೆಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಬಳಿಕ ಆಕೆಯನ್ನು ಅಟ್ಟಾಡಿಸಿ ಹೋಗಿ ಚಾಕುವಿನಿಂದ ಕತ್ತು ಹಾಗೂ ತಲೆಗೆ ಇರಿದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅಂತ್ರಾ, ಸಹಾಯಕ್ಕಾಗಿ ರಸ್ತೆಯಲ್ಲಿ ಒಡಿದ್ದಾಳೆ, ಹಾಗೂ ಬೈಕ್' ಸವಾರರಿಂದ ನೆರವು ಕೇಳಿದ್ದಾಳೆ. ಬೈಕ್ ಸವಾರ ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ದಾರಿಮಧ್ಯೆಯೇ ಆಕೆ ಕೊನೆಯುಸಿರೆಳೆದಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.