ಬೆಂಗಳೂರಿನಿಂದ ತೆರಳುತ್ತಿದ್ದ ರೈಲಿನ ಎಂಜಿನ್‌ನಲ್ಲಿ ದಟ್ಟಹೊಗೆ

Published : Apr 28, 2019, 09:10 AM IST
ಬೆಂಗಳೂರಿನಿಂದ ತೆರಳುತ್ತಿದ್ದ ರೈಲಿನ ಎಂಜಿನ್‌ನಲ್ಲಿ ದಟ್ಟಹೊಗೆ

ಸಾರಾಂಶ

ಚಲಿಸುತ್ತಿದ್ದ ರೈಲಿನ ಎಂಜಿನ್‌ನಲ್ಲಿ ದಿಢೀರ್‌ ದಟ್ಟಹೊಗೆ ಕಾಣಿಸಿಕೊಂಡು ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ನಗರದ ಹೂಡಿ ರೈಲ್ವೆ ನಿಲ್ದಾಣದಲ್ಲಿ ಜರುಗಿತು. 

ಬೆಂಗಳೂರು :  ಚಲಿಸುತ್ತಿದ್ದ ರೈಲಿನ ಎಂಜಿನ್‌ನಲ್ಲಿ ದಿಢೀರ್‌ ದಟ್ಟಹೊಗೆ ಕಾಣಿಸಿಕೊಂಡು ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ನಗರದ ಹೂಡಿ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಜರುಗಿತು. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ.

ಕೋಲಾರದ ಬಂಗಾರಪೇಟೆಯಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ರೈಲು ಸಂಜೆ 5.30ರ ಸುಮಾರಿಗೆ ಹೂಡಿ ರೈಲ್ವೆ ನಿಲ್ದಾಣದ ಸಮೀಪ ಬಂದಾಗ ಎಂಜಿನ್‌ನಲ್ಲಿ ದಟ್ಟಹೊಗೆ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ರೈಲು ಚಾಲಕ ರೈಲಿನ ವೇಗ ನಿಯಂತ್ರಿಸಿ ಹೂಡಿ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲ್ಲಿಸಿದ್ದಾರೆ. ಅಷ್ಟರಲ್ಲಿ ರೈಲ್ವೆ ನಿಲ್ದಾಣದ ಸಿಬ್ಬಂದಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದರಿಂದ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹೊಗೆ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎಂಜಿನ್‌ನಲ್ಲಿ ದಟ್ಟಹೊಗೆ ಕಾಣಿಸಿಕೊಂಡ ಪರಿಣಾಮ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ವಿಳಂಬವಾಯಿತು. ನಂತರ ರೈಲು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ತಲುಪಿತು. ತಾಂತ್ರಿಕದೋಷದಿಂದ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಬೆಂಗಳೂರು ರೈಲ್ವೆ ವಿಭಾಗೀಯ ಹಿರಿಯ ಅಧಿಕಾರಿ ಶ್ರೀಧರ್‌ಮೂರ್ತಿ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ