
ನವದೆಹಲಿ(ಜ.10): ಬಿಎಸ್'ಎಫ್ ಅಧಿಕಾರಿಗಳು ಸೈನಿಕರಿಗೆ ಆಹಾರ ಸೇರಿದಂತೆ ಕಳಪೆ ಸೌಲಭ್ಯ ನೀಡುತ್ತಿದ್ದಾರೆ ಎಂದು ಆರೋಪಿಸಿ ಫೇಸ್'ಬುಕ್'ನಲ್ಲಿ ಪೋಸ್ಟ್ ಮಾಡಿದ್ದ ಯೋಧ ತೇಜ್ ಬಹುದ್ದೂರ್ ಯಾದವ್ ದಿನ ಬೆಳಗಾಗುವುದರಲ್ಲಿ ಫೇಸ್'ಬುಕ್'ನಲ್ಲಿ ರಾಷ್ಟ್ರೀಯ ಹೀರೋ ಆಗಿದ್ದಾನೆ.
ನಿನ್ನೆಯವರೆಗೂ 7 ಸಾವಿರ ಫಾಲೋವರ್ಸ್ ಇದ್ದವರು ಒಂದೇ ದಿನಕ್ಕೆ 80 ಸಾವಿರಕ್ಕೂ ಅಧಿಕ ಮಂದಿ ಸೇರಿಕೊಂಡಿದ್ದಾರೆ. ಅಲ್ಲದೆ ಈತನ ಹೆಸರಿನಲ್ಲಿ ಅಭಿಮಾನಿಗಳು 6ಕ್ಕೂ ಹೆಚ್ಚು ನಕಲಿ ಪೇಜ್'ಗಳನ್ನು ಕೂಡ ತೆರದಿದ್ದಾರೆ. ತೇಜ್ ಹಾಕಿರುವ ಪೋಸ್ಟ್'ಗಳನ್ನು ಅಭಿಮಾನಿಗಳು ರೀಪೋಸ್ಟ್ ಮಾಡುತ್ತಿದ್ದಾರೆ.
29 ವರ್ಷದ ತೇಜ್ ಬಹುದ್ದೂರ್ ಯಾದವ್ 29ನೇ ಬೆಟಾಲಿಯನ್ ಸಶಸ್ತ್ರ ಸೀಮಾ ದಳ'ನಲ್ಲಿ ಕೆಲಸ ಮಾಡುತ್ತಿದ್ದು, ಯೋಧರಿಗೆ ಕಳಪೆ ಆಹಾರ ನೀಡುತ್ತಿರುವ ಬಗ್ಗೆ ಫೇಸ್'ಬುಕ್'ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ. ಈ ವಿಡಿಯೋ ರಾಷ್ಟ್ರದಾದ್ಯಂತ ಸುದ್ದಿಯಾಗಿ ಗೃಹಸಚಿವರು ಈ ಸುದ್ದಿಯ ಬಗ್ಗೆ ಬಿಎಸ್'ಎಫ್ ಅಧಿಕಾರಿಗಳನ್ನು ಸ್ಪಷ್ಟನೆ ಕೇಳಿದ್ದರು. ಬಿಎಸ್'ಎಫ್ ಈತನ ಆರೋಪವನ್ನು ನಿರಾಕರಿಸಿ ಇವನೊಬ್ಬ ಮದ್ಯ ವ್ಯಸನಿಯಾಗಿದ್ದು, ಸೇನೆಗೆ ಸೇರಿದಾಗಿನಿಂದಲೂ ಆತನಿಗೆ ನಿರಂತರ ಕೌನ್ಸಿಲಿಂಗ್ ಮಾಡಲಾಗುತ್ತಿದೆ. ಅಲ್ಲದೇ, ಪೂರ್ವಾನುಮತಿಯಿಲ್ಲದೇ ಆತ ಸೇವೆಗೆ ಗೈರು ಹಾಜರಾಗುತ್ತಾನೆ. ಹಿರಿಯ ಅಧಿಕಾರಿಗಳೊಂದಿಗೂ ಅಸಭ್ಯವಾಗಿ ವರ್ತಿಸುತ್ತಿದ್ದಾನೆ' ಎಂದು ತಿಳಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.