ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ತೇಜ್ ಪ್ರತಾಪ್ ವಾರಣಾಸಿಗೆ ತೆರಳಿದ್ದೇಕೆ..?

Published : Nov 08, 2018, 01:11 PM IST
ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ತೇಜ್ ಪ್ರತಾಪ್ ವಾರಣಾಸಿಗೆ ತೆರಳಿದ್ದೇಕೆ..?

ಸಾರಾಂಶ

ಆರ್ ಜೆಡಿ ಮುಖಂಡ ಲಾಲೂ ಪ್ರಸಾದ್   ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬಳಿಕ ವಾರಣಾಸಿಗೆ ತೆರಳಿದ್ದಾರೆ. 

ಪಾಟ್ನಾ :  ಆರ್ ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್  ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬಳಿಕ ನಾಪತ್ತೆಯಾಗಿದ್ದು, ಎಲ್ಲೆಡೆ ಸುದ್ದಿಯಾಗಿತ್ತು. 

ಇದೀಗ ನಾಪತ್ತೆಯಾದ ತೇಜ್ ಪ್ರತಾಪ್ ವಾರಣಾಸಿಯಲ್ಲಿ ಪತ್ತೆಯಾಗಿದ್ದಾರೆ. ಶಾಂತಿ ಬಯಸಿ ವಾರಣಾಸಿಗೆ ತೆರಳಿದ್ದಾರೆ ಎನ್ನಲಾಗಿದೆ.

ಕಳೆದ ಮೇ ತಿಂಗಳಿನಲ್ಲಷ್ಟೇ ವಿವಾಹವಾಗಿದ್ದ ತೇಜ್ ಪ್ರತಾಪ್ ಪತ್ನಿ ಐಶ್ವರ್ಯ ಜೊತೆ ಮನಸ್ತಾಪವಾಗಿದ್ದು, ಈ ನಿಟ್ಟಿನಲ್ಲಿ ತಾವು ವಿಚ್ಛೇದನ ಬಯಸುತ್ತಿರುವುದಾಗಿ ತಿಳಿಸಿದ್ದರು. ಇದಾದ ಬಳಿಕ ತಂದೆ ಲಾಲೂ ಪ್ರಸಾದ್ ಯಾದವ್ ಅವರು ಮಗನ ಮನವೊಲಿಸಲು ಪ್ರಯತ್ನಿಸಿದ್ದರು. 

ಆದರೆ ತಂದೆಯೊಡನೆ ಮಾತುಕತೆ ನಡೆದ ಬಳಿಕ ತೇಜ್ ಪ್ರತಾಪ್ ಬೋದ್ ಗಯಾದ ಹೋಟೆಲ್ ನಲ್ಲಿ ತಂಗುವುದಾಗಿ ತೆರಳಿದ್ದವರು ಅಲ್ಲಿಂದಲೇ ನಾಪತ್ತೆಯಾಗಿದ್ದರು. 

ಮನೆಯಲ್ಲಿ ದೀಪಾವಳಿ ಹಬ್ಬವಿದ್ದರೂ ಕೂಡ ಮನೆಗೆ ವಾಪಸಾಗದೇ ತೇಜ್ ಪ್ರತಾಪ್ ವಾರಣಾಸಿಗೆ ತೆರಳಿದ್ದಾರೆ. ಸಂಪೂರ್ಣ ಕುಟುಂಬವೇ ಇದೀಗ ತೇಜ್ ಪ್ರತಾಪ್ ಆಗಮನಕ್ಕಾಗಿ ಕಾಯುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ
ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ