
ಹೈದ್ರಾಬಾದ್ : ಐದು ರಾಜ್ಯಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಸರಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಈಗಲಾದರೂ ಕಾಂಗ್ರೆಸ್ ಮಂತಯಂತ್ರ ತಿರುಚಿದೆ ಎಂದು ಆರೋಪಿಸುವುದಿಲ್ಲವೆಂದುಕೊಂಡರೆ ಅದು ತಪ್ಪು. ಎಐಎಂಐಎಂ ಜತೆ ಕೈ ಜೋಡಿಸಿ ಸರಕಾರ ರಚಿಸುವ ಕನಸು ಕಾಣುತ್ತಿದ್ದ ಕಾಂಗ್ರೆಸ್ಗೆ ತೆಲಂಗಾಣದಲ್ಲಿ ತೀವ್ರ ಹಿನ್ನಡೆಯಾಗಿದ್ದು, ಅಲ್ಲಿ ಮತಯಂತ್ರವನ್ನು ತಿರುಚಲಾಗಿದೆ ಎಂದು ಆರೋಪಿಸುತ್ತಿದೆ.
ಕಳೆದ ಡಿಸೆಂಬರ್ 7 ಎಂದು ನಡೆದ ತೆಲಂಗಾಣದ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ತೆಲಂಗಾಣ ಸರ್ಕಾರ ರಚಿಸುವಷ್ಟು ಬಹುಮತ ಟಿಐರ್ಎಸ್ಗೆ ಸಿಕ್ಕಿದೆ. ಕೆ.ಸಿ.ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್ಎಸ್ 85 ಸ್ಥಾನಗಳಲ್ಲಿ ಗೆಲುವು ಪಡೆದಿದ್ದು, ಕಾಂಗ್ರೆಸ್ ಮೈತ್ರಿಕೂಟ ಕೇವಲ 23 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಇತರರು 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿಗೆ ಮೂರು ಕ್ಷೇತ್ರಗಳಲ್ಲಿ ಜಯಲಕ್ಷ್ಮಿ ಒಲಿದಿದ್ದಾಳೆ.
ತೆಲಂಗಾಣದಲ್ಲಿ ಕೆಸಿಆರ್ ನೇತೃತ್ವದ ಟಿಆರ್ಎಸ್ ಬಹುಮತ ಪಡೆದ ಬೆನ್ನಲ್ಲೇ ರಾಜ್ಯದಲ್ಲಿ ಮತಯಂತ್ರವನ್ನು ತಿರುಚಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಮತಯಂತ್ರ ತಿರುಚಿರುವ ಸಾಧ್ಯತೆ ಇದ್ದು, ವಿವಿ ಪ್ಯಾಟ್ ಸ್ಲಿಪ್ ಗಳ ಮೂಲಕ ಮತ ಎಣಿಕೆ ಮಾಡಬೇಕು ಎಂದು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಉತ್ತಮ್ ಕುಮಾರ್ ರೆಡ್ಡಿ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ 60 ಮ್ಯಾಜಿಕ್ ನಂಬರ್. ಟಿಆರ್ಎಸ್ 85 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ರಾಜ್ಯ ರಚನೆಯಾದ ನಂತರ ಎರಡನೇ ಬಾರಿ ಪಕ್ಷ ಗದ್ದುಗೆ ಏರುತ್ತಿದೆ.
ಡಿಸೆಂಬರ್ 7 ರಂದು ದೇಶದ ಪಂಚರಾಜ್ಯಗಳಾದ ಮಧ್ಯ ಪ್ರದೇಶ, ತೆಲಂಗಾಣ, ಮಿಜೋರಾಂ, ಛತ್ತೀಸ್ ಗಢ, ರಾಜಸ್ಥಾನದಲ್ಲಿ ಮುಕ್ತಾಯವಾದ ಚುನಾವಣೆ ಫಲಿತಾಂಶ ಇಂದು [ಡಿ.11] ಹೊರಬಿದ್ದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.