ಈ ರಾಜ್ಯದಲ್ಲಿ ಕಾಂಗ್ರೆಸ್ ತೊರೆಯಲು ಮುಂದಾದರಾ 12 ಶಾಸಕರು?

Published : Jun 06, 2019, 04:31 PM ISTUpdated : Jun 06, 2019, 04:36 PM IST
ಈ ರಾಜ್ಯದಲ್ಲಿ ಕಾಂಗ್ರೆಸ್ ತೊರೆಯಲು ಮುಂದಾದರಾ 12 ಶಾಸಕರು?

ಸಾರಾಂಶ

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ತೀವ್ರ ಹಿನ್ನಡೆ ಎದುರಿಸುತ್ತಿದ್ದು, ಇದೀಗ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ.

ಹೈದ್ರಾಬಾದ್ : ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದ್ದು 12 ಶಾಸಕರು ಟಿಆರ್ ಎಸ್ ನೊಂದಿಗೆ ಸೇರಲು  ಸ್ಪೀಕರ್ ಭೇಟಿ ಮಾಡಿದ್ದಾರೆ. ಸ್ಪೀಕರ್ ಶ್ರೀನಿವಾಸ್ ರೆಡ್ಡಿ ಭೇಟಿ ಮಾಡಿದ ಅವರು ಆಡಳಿತ ಪಕ್ಷದೊಂದಿಗೆ ಸೇರಲು ಮನವಿ ಮಾಡಿದ್ದಾರೆ. 

119 ಸದಸ್ಯ ಸ್ಥಾನವುಳ್ಳ  ತೆಲಂಗಾಣ ಅಸೆಂಬ್ಲಿಯಲ್ಲಿ ಸದ್ಯ ಕಾಂಗ್ರೆಸ್ ಸ್ಥಾನಗಳು 18ಕ್ಕೆ ಇಳಿದಿವೆ.  ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಉತ್ತಮ್ ಕುಮಾರ್ ರೆಡ್ಡಿ ನಲಗೊಂಡ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ನಿಟ್ಟಿನಲ್ಲಿ 19 ಇದ್ದ ಸದಸ್ಯ ಸಂಖ್ಯೆ 18ಕ್ಕೆ ಇಳಿಕೆಯಾಗಿತ್ತು. ಇದೀಗ 12 ಕೈ ಶಾಸಕರು TRS ನೊಂದಿಗೆ ಸೇರಲು ಸಜ್ಜಾಗಿದ್ದಾರೆ. 

ತಂದೂರು ಕಾಂಗ್ರೆಸ್ ಶಾಸಕ ರೋಹಿತ್ ರೆಡ್ಡಿ, ಟಿಆರ್ ಎಸ್ ಅಧ್ಯಕ್ಷ ಹಾಗೂ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಪುತ್ರ ಕೆಟಿ ರಾಮರಾವ್ ಭೇಟಿ ಮಾಡಿ  ತಾವು ಆಡಳಿತ ಪಕ್ಷಕ್ಕೆ ನಿಷ್ಠರಾಗಿರುವುದಾಗಿ ಹೇಳಿದ್ದರು. ಇದೀಗ ಶಾಸಕರು ಸ್ಪೀಕರ್ ಭೇಟಿ ಮಾಡಿ ಆಡಳಿತ ಪಕ್ಷದೊಂದಿಗೆ ಸೇರಿ ಮುನ್ನಡೆಯಲು ನಿರ್ಧರಿಸಿದ್ದಾರೆ. 

ಕಳೆದ ಮಾರ್ಚ್ ತಿಂಗಳಲ್ಲೇ ಶಾಸಕರು ಕಾಂಗ್ರೆಸ್ ತೊರೆಯುವುದಾಗಿ ಹೇಳಿದ್ದರು.  ಇದೀಗ 12 ಕಾಂಗ್ರೆಸ್ ಶಾಸಕರು ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಟಿಆರ್ ಎಸ್ ಜೊತೆ ಸೇರಲು ಬಯಸುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ವೆಂಕಟ ರಮಣ ರೆಡ್ಡಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌
ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌