
ಶಬರಿಮಲೆ (ಡಿ.25): ವಾಹನದಲ್ಲಿ ರಿವಾಲ್ವರ್ ಮತ್ತು ಮದ್ಯ ಇಟ್ಟುಕೊಂಡಿದ್ದ ಕಾರಣಕ್ಕಾಗಿ ಇಲ್ಲಿನ ಪ್ರಸಿದ್ಧ ಅಯ್ಯಪ್ಪ ಸ್ವಾಮಿ ದೇವಾಲಯದ ಬಳಿ ತೆಲಂಗಾಣದ 6 ಮಂದಿ ಯಾತ್ರಿಗಳನ್ನು ಬಂಧಿಸಲಾಗಿದೆ.
ಪಂಪಾ ಬಳಿಯ ಟೋಲ್ ಗೇಟ್ನಲ್ಲಿ ತಪಾಸಣೆಯ ವೇಳೆ ಯಾತ್ರಿಕರಿಂದ 1 ಗನ್ ಮತ್ತು 4 ಮದ್ಯದ ಬಾಟಲಿ ವಶಪಡಿಸಿಕೊಳ್ಳಲಾಗಿದೆ. ಭಕ್ತಾದಿಗಳ ಬಳಿ ಗನ್ ಲೈಸೆನ್ಸ್ ಇದ್ದರೂ, ಶಬರಿಮಲೆ ಸುತ್ತಮುತ್ತಲಿನ ಬಿಗಿ ಭದ್ರತೆಯ ಪ್ರದೇಶದಲ್ಲಿ ಶಸ್ತ್ರಾಸ್ತ್ರ ನಿಷೇಧಿಸಲಾಗಿದೆ. ಹೀಗಾಗಿ ಆರೋಪಿಗಳ ವಿರುದ್ಧ ಕೇರಳ ಪೊಲೀಸ್ ಕಾಯ್ದೆಯ ಅಡಿಯಲ್ಲಿ ಕೇಸು ದಾಖಲಿಸಿಕೊಳ್ಳಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.