
ಹೈದರಾಬಾದ್: ರಾಜ್ಯದಲ್ಲಿನ ಎಸ್ಸಿ, ಎಸ್ಟಿ, ಅರ್ಚಕರು, ಇಮಾಮ್ಗಳಿಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಕೆಲವು ಕಲ್ಯಾಣ ಯೋಜನೆಗಳನ್ನು ಪ್ರಕಟಿಸಿದ್ದಾರೆ.
ಈ ಪ್ರಕಾರ, ಎಸ್ಸಿ ಹಾಗೂ ಎಸ್ಟಿ ಸಮುದಾಯದ ಗೃಹಬಳಕೆಯ ಉಚಿತ ವಿದ್ಯುತ್ ಅನ್ನು 50 ಯುನಿಟ್ನಿಂದ 101 ಯುನಿಟ್ಗೆ ವಿಸ್ತರಿಸಲಾಗಿದೆ. ಇನ್ನು, ರಾಜ್ಯ ಸರ್ಕಾರದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಸ್ಥಾನಗಳಲ್ಲಿ ಪೂಜಾ ಕೈಂಕರ್ಯ ಕೈಗೊಳ್ಳುವ ಅರ್ಚಕರಿಗೆ ಸರ್ಕಾರಿ ನೌಕರರಿಗೆ ನೀಡಲಾಗುವ ಮೊತ್ತದ ವೇತನ ನೀಡಲಾಗುತ್ತದೆ.
ಅಲ್ಲದೆ, ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡುವ ಪ್ರತೀ ಸಂದರ್ಭದಲ್ಲಿಯೂ, ಅರ್ಚಕರ ವೇತನವನ್ನೂ ಪರಿಷ್ಕರಿಸಲಾಗುತ್ತದೆ. ಇದರ ಜೊತೆಗೆ, ಅರ್ಚಕರ ನಿವೃತ್ತಿ ವಯೋಮಿತಿಯನ್ನು 58 ವರ್ಷದ ಬದಲಿಗೆ 62ಕ್ಕೆ ವಿಸ್ತರಿಸಲಾಗುತ್ತದೆ. ಇನ್ನು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಇಮಾಮ್ಗಳು ಹಾಗೂ ಮೌಜಾಮ್ಗಳಿಗೆ ಸೆಪ್ಟೆಂಬರ್ನಿಂದಲೇ ಅನ್ವಯವಾಗುವಂತೆ ಪ್ರತೀ ತಿಂಗಳು 5000 ರು. ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.