ಮೊಬೈಲ್‌ ಕಂಪನಿಗಳು ಆಧಾರ್ ಕೇಳುವಂತಿಲ್ಲ

Published : Oct 27, 2018, 08:43 AM IST
ಮೊಬೈಲ್‌ ಕಂಪನಿಗಳು ಆಧಾರ್ ಕೇಳುವಂತಿಲ್ಲ

ಸಾರಾಂಶ

ಬೆರಳಚ್ಚು ಮೂಲಕ ಆಧಾರ್‌ ದೃಢೀಕರಣ ಮಾಡುವುದಕ್ಕೆ ಮೊಬೈಲ್‌ ಕಂಪನಿಗಳಿಗೆ ಸರ್ಕಾರ ನಿರ್ಬಂಧ ಹೇರಿದಂತಾಗಿದೆ. ಆದರೆ, ಚಂದಾದಾರರು ತಮ್ಮ ವಿಳಾಸ ಹಾಗೂ ಗುರುತು ದೃಢೀಕರಣಕ್ಕಾಗಿ ಆಧಾರ ಕಾರ್ಡನ್ನು ಕಂಪನಿಗಳಿಗೆ ಸ್ವಯಂಪ್ರೇರಿತವಾಗಿ ನೀಡಬಹುದು

ನವದೆಹಲಿ: ಇತ್ತೀಚಿನ ಸುಪ್ರೀಂ ಕೋರ್ಟ್‌ ಆದೇಶಾನುಸಾರ ಯಾವುದೇ ಟೆಲಿಕಾಂ ಕಂಪನಿಗಳು ಹಾಲಿ ಮೊಬೈಲ್‌ ಚಂದಾದಾರರು ಹಾಗೂ ಹೊಸ ಚಂದಾದಾರರಿಗೆ ‘ಆಧಾರ್‌ ದೃಢೀಕರಣ’ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದೆ. 

ಇದರಿಂದಾಗಿ ಬೆರಳಚ್ಚು ಮೂಲಕ ಆಧಾರ್‌ ದೃಢೀಕರಣ ಮಾಡುವುದಕ್ಕೆ ಮೊಬೈಲ್‌ ಕಂಪನಿಗಳಿಗೆ ಸರ್ಕಾರ ನಿರ್ಬಂಧ ಹೇರಿದಂತಾಗಿದೆ.

ಆದರೆ, ಚಂದಾದಾರರು ತಮ್ಮ ವಿಳಾಸ ಹಾಗೂ ಗುರುತು ದೃಢೀಕರಣಕ್ಕಾಗಿ ಆಧಾರ ಕಾರ್ಡನ್ನು ಕಂಪನಿಗಳಿಗೆ ಸ್ವಯಂಪ್ರೇರಿತವಾಗಿ ನೀಡಬಹುದು. ಕಂಪನಿಗಳು ಕಾರ್ಡನ್ನು ಸ್ವೀಕರಿಸಬಹುದು. ಆದರೆ ಬೆರಳಚ್ಚು ದೃಢೀಕರಣ ಮಾಡಿಕೊಳ್ಳುವಂತಿಲ್ಲ ಎಂದು ಶುಕ್ರವಾರ ಸರ್ಕಾರ ಆದೇಶಿಸಿದೆ.

ಇದೇ ವೇಳೆ ಸುಪ್ರೀಂ ಕೋರ್ಟ್‌ ಆದೇಶಕ್ಕೆ ಬದ್ಧರಾಗಿರುವುದಾಗಿ ಸರ್ಕಾರಕ್ಕೆ ಮೊಬೈಲ್‌ ಕಂಪನಿಗಳು ಅನುಸರಣಾ ಪತ್ರ ನೀಡಬೇಕು ಸೂಚಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?