
ಹಾಸನ (ಫೆ.18): ಬೇಲೂರು ಚನ್ನಕೇಶವ ದೇಗುಲದಲ್ಲಿ ನಿಯಮ ಉಲ್ಲಂಘಿಸಿ ಚಿತ್ರೀಕರಣ ನಡೆಸಿದ್ದ ತೆಲುಗು ಚಿತ್ರತಂಡವು ಶೂಟಿಂಗ್ ಸ್ಥಗಿತಗೊಳಿಸಿ ವಾಪಾಸಾಗಿದೆ.
ನಿಯಮಗಳನ್ನು ಉಲ್ಲಂಘಿಸಿ, ಭಕ್ತರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ನಟ ಅಲ್ಲು ಅರ್ಜುನ್ ಅಭಿನಯದ ‘ಡಿಜೆ’ ಚಿತ್ರಕ್ಕೆ ಶೂಟಿಂಗ್ ನಡೆಸಿದ ಬಗ್ಗೆ ನಿನ್ನೆ ಸುವರ್ಣ ನ್ಯೂಸ್ ವರದಿ ಮಾಡಿತ್ತು.
ವೈಷ್ಣವ ದೇವಾಲಯವಾಗಿರುವ ಚನ್ನಕೇಶವ ದೇಗುಲದಲ್ಲಿ ಚಿತ್ರತಂಡವು ಶಿವನ ವಿಗ್ರಹವನ್ನು ಪ್ರತಿಷ್ಠಾಪಿಸಿ ಚಿತ್ರೀಕರಣ ನಡೆಸುತ್ತಿತ್ತು.
ಪುರಾತತ್ವ ಇಲಾಖೆ ಆದೇಶದ ಹಿನ್ನೆಲೆಯಲ್ಲಿ ರಾತ್ರಿಯೇ ಶೂಟಿಂಗ್ ಸ್ಥಗಿತಗೊಳಿಸಿ ತೆಲುಗು ಚಿತ್ರತಂಡ ಹೊರಟು ಹೋಗಿದೆ.
ಚಿತ್ರೀಕರಣ ಸ್ಥಗಿತವಾಗಿದ್ದರಿಂದ ಪ್ರವಾಸಿಗರಿಗೆ ದೇಗುಲ ವೀಕ್ಷಿಸಲು ಮುಕ್ತವಾತಾವರಣ ದೊರಕಿದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.