
ನವದೆಹಲಿ: ಈ ಬೇಸಿಗೆಯಲ್ಲಿ ದೇಶದ ಬಹುತೇಕ ಕಡೆಗಳಲ್ಲಿ ಭಾರೀ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಭಾನುವಾರ ಎಚ್ಚರಿಕೆ ನೀಡಿದೆ. ಏಪ್ರಿಲ್ನಿಂದ- ಜೂನ್ ಅವಧಿಯಲ್ಲಿ ತಾಪಮಾನ ಸಾಮನ್ಯಕ್ಕಿಂತ ಅಧಿಕವಾಗಿರಲಿದೆ. ಆದರೆ, ಓಡಿಶಾ, ಆಂಧ್ರ ಕರಾವಳಿ ಮತ್ತು ತೆಲಂಗಾಣದಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಕೊಂಚ ಕಡಿಮೆ ಇರುವ ನಿರೀಕ್ಷೆ ಇದೆ. ಹೀಗಾಗಿ ಮುಂಗಾರು ನಿಗದಿತ ಸಮಯಕ್ಕೆ ಆಗಮಿಸುವ ಸೂಚನೆ ಲಭಿಸಿದೆ.
ಉತ್ತರ ಮತ್ತು ಕೇಂದ್ರ ಭಾರತದಲ್ಲಿ ಹಿಂದಿನ ವರ್ಷಗಳಂತೆ ಈ ವರ್ಷವೂ ತಾಪಮಾನ ಸಾಮಾನ್ಯಕ್ಕಿಂತ ಅಧಿಕವಾಗಿರಲಿದೆ. ೨೦೧೭ ಇದುವೆರಿಗಿನ ಅತ್ಯಧಿಕ ಬಿಸಿಲಿನ ವರ್ಷ ಎನಿಸಿಕೊಂಡಿದೆ. 2006ರಲ್ಲಿ ರಾಜಸ್ಥಾನದ ಫಾಲ್ಗೋಡಿಯಲ್ಲಿ 51 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಭಾರತದಲ್ಲಿ ದಾಖಲಾದ ಅತ್ಯಧಿಕ ಉಷ್ಣಾಂಶ ಎನಿಸಿಕೊಂಡಿದೆ. ಈ ವರ್ಷ ತಾಪಮಾನ ಸಾಮಾನ್ಯಕ್ಕಿಂತ ಅಧಿಕವಾಗಿದ್ದರೂ, 2017ರ ತಾಪಮಾನಕ್ಕಿಂತ ಕಡಿಮೆ ಯಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
2013ರಿಂದ 2017ರ ಅವಧಿಯಲ್ಲಿ ಓಡಿಶಾ, ಆಂಧ್ರ ಪ್ರದೇಶ ಮತ್ತು ತೆಲಂಗಾಣಗಳಲ್ಲಿ ಉಂಟಾದ ಭೀಕರ ಉಷ್ಣ ಮಾರುತದಿಂದ 4,624 ಜನರು ಸಾವನ್ನಪ್ಪಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.