ರಾಜ್ಯದ ಜನರಿಗಿದು ಶಾಕಿಂಗ್ ಸುದ್ದಿ

Published : May 05, 2019, 08:10 AM IST
ರಾಜ್ಯದ ಜನರಿಗಿದು ಶಾಕಿಂಗ್ ಸುದ್ದಿ

ಸಾರಾಂಶ

ರಾಜ್ಯ ಹವಾಮಾನ ಇಲಾಖೆ ರಾಜ್ಯದ ಜನತೆಗೆ ಶಾಕಿಂಗ್ ಸುದ್ದಿಯೊಂದನ್ನು ನಿಡಿದೆ. ಅದೇನದು?

ಬೆಂಗಳೂರು :  ‘ಫೋನಿ’ ಚಂಡಮಾರುತ ಹಾಗೂ ಮೇಲ್ಮೈ ಸುಳಿಯ ಪ್ರಭಾವ ಕಡಿಮೆಯಾದ ಹಿನ್ನೆಲೆಯಲ್ಲಿ ಸದ್ಯ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆಗಳಿಲ್ಲ. ಆದರೆ, ಒಂದೆರಡು ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಏರಿಕೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ನೀಡಿದೆ.

ಚಂಡಮಾರುತದಿಂದ ರಾಜ್ಯದ ಮೇಲೆ ಅಷ್ಟೊಂದು ಪರಿಣಾಮವಾಗಿಲ್ಲ. ಇನ್ನು ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಸುರಿಯುತ್ತಿದ್ದ ಮಳೆ ಪ್ರಭಾವವೂ ಕಡಿಮೆಯಾಗಿದೆ. ಮುಂದಿನ ಮೂರರಿಂದ ನಾಲ್ಕು ದಿನ ರಾಜ್ಯದಲ್ಲಿ ಮಳೆ ಆಗುವ ಲಕ್ಷಣಗಳಿಲ್ಲ. ಹೀಗಾಗಿ ರಾಜ್ಯದಲ್ಲಿ ಉಷ್ಣಾಂಶದ ಪ್ರಮಾಣ ಒಂದರಿಂದ ಎರಡು ಡಿಗ್ರಿ ಸೆಲ್ಸಿಯಸ್‌ನಷ್ಟುಹೆಚ್ಚಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ ಸುನೀಲ್‌ ಗವಾಸ್ಕರ್‌ ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದ್ದಾರೆ.

ಬಿಸಿಗಾಳಿ ಕಡಿಮೆ:

ಶುಭ್ರಾಕಾಶದಿಂದ ಉಷ್ಣಾಂಶದ ಪ್ರಮಾಣ ಹೆಚ್ಚಾದರೂ ಬಿಸಿ ಗಾಳಿ ಬೀಸುವುದಿಲ್ಲ. ಕಾರಣ, ಕಳೆದ ಒಂದು ವಾರದಿಂದ ದಕ್ಷಿಣ ಭಾರತದಲ್ಲಿ ಚಂಡಮಾರುತದಿಂದ ವ್ಯಾಪಕವಾಗಿ ಮಳೆ ಆಗಿದೆ ಮತ್ತು ವಾತಾವರಣದಲ್ಲಿ ತೇವಾಂಶದ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ, ಬಿಸಿಗಾಳಿ ಬೀಸುವ ಸಾಧ್ಯತೆ ಕಡಿಮೆ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!