ಚಂದ್ರಗ್ರಹಣ : ದೇವರ ದರ್ಶನ, ಪೂಜೆ ಸಮಯ ಬದಲಾವಣೆ

Published : Jul 15, 2019, 09:08 AM IST
ಚಂದ್ರಗ್ರಹಣ : ದೇವರ ದರ್ಶನ, ಪೂಜೆ ಸಮಯ ಬದಲಾವಣೆ

ಸಾರಾಂಶ

ಚಂದ್ರಗ್ರಹಣ ಪ್ರಯುಕ್ತ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನ, ಪೂಜೆಗಳ ಸಮಯದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಮಂಗಳವಾರ ಚಂದ್ರಗ್ರಹಣ ಸಂಭವಿಸಲಿದೆ. 

ಹುಬ್ಬಳ್ಳಿ/ಮಂಗಳೂರು: ಜು.16ರಂದು ನಡೆಯಲಿರುವ ಚಂದ್ರಗ್ರಹಣ ಪ್ರಯುಕ್ತ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನ, ಪೂಜೆಗಳ ಸಮಯದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. 

ಎಲ್ಲ ದೇವಸ್ಥಾನಗಳಲ್ಲಿ ಬೆಳಗ್ಗೆ ಮತ್ತು ಮಧ್ಯಾಹ್ನದ ಪೂಜೆ, ದರ್ಶನಗಳು ಯಥಾಪ್ರಕಾರ ನಡೆಯಲಿದೆ. ಸಂಜೆ ಪೂಜೆ, ದರ್ಶನಗಳ ವೇಳೆಯಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾತ್ರಿಯ ಮಹಾಪೂಜೆ ಸಂಜೆ 6.30ಕ್ಕೆ ನೆರವೇರಲಿದ್ದು, 7 ಗಂಟೆಗೆ ದೇವಳದ ಬಾಗಿಲು ಮುಚ್ಚಲಾಗುವುದು. ಆ ದಿನ ಸಾಯಂಕಾಲ ಆಶ್ಲೇಷ ಬಲಿ ಸೇವೆ, ರಾತ್ರಿ ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ. 

ಶಿರಸಿ ಮಾರಿಕಾಂಬಾ ದೇವಾಲಯದಲ್ಲೂ ಸಂಜೆ 7 ಗಂಟೆಯೊಳಗೆ ಮಹಾಪೂಜೆಯನ್ನು ನೆರವೇರಿಸಿ ದೇವಾಲಯದ ಬಾಗಿಲು ಹಾಕಲಾಗುತ್ತದೆ. ಕೊಪ್ಪಳ ತಾಲೂಕಿನ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಸಂಜೆ 6 ಗಂಟೆವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಗೋಕರ್ಣ ಶ್ರೀ ಮಹಾಬಲೇಶ್ವರ ದೇವಾಲಯ, ಇಡಗುಂಜಿ ವಿನಾಯಕ ದೇವಸ್ಥಾನಗಳದಲ್ಲಿ ಗ್ರಹಣ ಕಾಲದಲ್ಲಿ, ಅಂದರೆ ರಾತ್ರಿ 1.32ರಿಂದ ಮುಂಜಾನೆ 4.29ರವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ದೇವರಿಗೆ ಅಭಿಷೇಕ, ಪೂಜೆ ನೆರವೇರಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮಳವಳ್ಳಿಗೆ ಆಗಮನ ನಿರೀಕ್ಷೆ
ಧಾರವಾಡ: ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಭೇಟಿ ಮಾಡಿಸಲು ಹೈಕೋರ್ಟ್ ಸೂಚನೆ