
ಜಮ್ಮು ಕಾಶ್ಮೀರ(ಸೆ.18): ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದೆ. ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್'ನಲ್ಲಿರುವ ಸೇನಾ ಪ್ರಧಾನ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದು, ಗುಂಡಿನ ಚಕಮಕಿ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
7 ಭಾರತೀಯ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಅಂತ ಹೇಳಲಾಗುತ್ತಿದೆ. 3 ರಿಂದ 4 ಉಗ್ರರ ಗುಂಪು ಬೆಳಿಗ್ಗೆ 5.30ರ ಸುಮಾರಿಗೆ ಸೇನಾ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿದರು. ಸೇನಾ ಕಚೇರಿಯ ಸುತ್ತ ಯೋಧರು ಕಾರ್ಯಾಚರಣೆಗಿಳಿದಿದ್ದು, ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ.
ಸ್ಥಳದಲ್ಲಿ ಈಗಾಗಲೇ ವಿಶೇಷ ಸೇನಾ ದಳ ಬೀಡುಬಿಟ್ಟಿದ್ದು, ಗಾಯಗೊಂಡ ಯೋಧರನ್ನು ರಕ್ಷಣೆ ಮಾಡುತ್ತಿದೆ. ದಾಳಿ ಹಿನ್ನೆಲೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಕೈಗೊಂಡಿದ್ದ ರಷ್ಯಾ ಮತ್ತು ಅಮೆರಿಕ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.